ಮಳೆಯ ಆರ್ಭಟಕ್ಕೆ ಮನೆ ಸಂಪೂರ್ಣ ಜಖಂ, ಮನೆಯಲ್ಲಿದ್ದ ಕುಟುಂಬಸ್ಥರು ಪ್ರಾಣಪಾಯದಿಂದ ಪಾರು
1 min read
ಚಿಕ್ಕಮಗಳೂರು : ಮಲೆನಾಡಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು ಮಳೆಯ ಅಬ್ಬರಕ್ಕೆ ಮೂಡಿಗೆರೆ ತಾಲೂಕಿನ ಸಾಲುಮರ ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಸಾಲುಮರ ಗ್ರಾಮದ ಈರಯ್ಯ ಎಂಬುವರಿಗೆ ಸೇರಿದ ಮನೆ ಸಂಪೂರ್ಣ ಕುಸಿದು ಬಿದ್ದಿದೆ. ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಅನೇಕ ಮನೆಗಳು ಕುಸಿದಿವೆ. ಮನೆ ಕಳೆದುಕೊಂಡ ಕುಟುಂಬಸ್ಥರು ಕಂಗಲಾಗಿದ್ದಾರೆ. ಸೂಕ್ತ ಪರಿಹಾರ ನೀಡುವಂತೆ ಮನೆ ಮಾಲೀಕರು ಆಗ್ರಹಿಸಿದ್ದಾರೆ. ತಡರಾತ್ರಿ ಮನೆಯಲ್ಲಿ ಮಲಗಿದ್ದಾಗ ಅವಘಡ ಸಂಭವಿಸಿದ್ದು ಮನೆಯಲ್ಲಿದ್ದ ಕುಟುಂಬಸ್ಥರು ಪ್ರಾಣೋಪಾಯದಿಂದ ಪಾರಾಗಿದ್ದಾರೆ.
ಇನ್ನು ಮನೆ ಜಖಂಗೊಂಡ ಹಿನ್ನೆಲೆ ಮನೆಯಲ್ಲಿದ್ದ ದವಸ, ದಾನ್ಯ, ಪಾತ್ರೆಗಳ ನಾಶವಾಗಿವೆ. ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g