ಅಪಘಾತಕ್ಕೀಡಾಗಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಹಸುವನ್ನ ಉಳಿಸಿದ ಸ್ಥಳಿಯರು
1 min read
ಅಪಘಾತಕ್ಕೀಡಾದ ಹಸುವನ್ನ ಕಂಡು ವೈದ್ಯರೇ ಉಳಿಯುವುದಿಲ್ಲ ಎಂದು ಹೇಳಿದ ಹಸುವನ್ನ ಸ್ಥಳಿಯರು ಉಳಿಸಿರುವ ಪ್ರೇರಣದಾಯಕ ಘಟನೆ ಚಿಕ್ಕಮಗಳೂರು ತಾಲೂಕಿನ ಕಣತಿ ಬಳಿ ನಡೆದಿದೆ. ರಸ್ತೆ ಬದಿ ಅಪಘಾತಕ್ಕೀಡಾಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಹಸುವನ್ನು ಪಶು ವೈದ್ಯರ ಸಹಕಾರದೊಂದಿಗೆ ಸ್ಥಳೀಯರೇ ರಕ್ಷಿಸಿದ್ದಾರೆ.ಚಿಕ್ಕಮಗಳೂರು-ಬಾಳೆಹೊನ್ನೂರು ಮಾರ್ಗದ ಕಣತಿ ಬಳಿ ವಾಹನ ಸವಾರರು ಹಸುವಿನ ಮೇಲೆ ವಾಹನ ಚಲಾಯಿಸಿ ಹೋಗಿದ್ದರು.
ಹೃದಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದ ಹಸುವನ್ನ ಸ್ಥಳಿಯರು ಕೂಡ ಹೋರಾಡಿ ಉಳಿಸಿದ್ದಾರೆ. ಹಸುವನ್ನ ಕಂಡ ಕೂಡಲೇ ಸ್ಥಳಿಯರು ಪಶು ವೈದ್ಯರಿಗೆ ಫೋನ್ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪಶು ವೈದ್ಯರ ಸಹಾಯಕ ಸ್ಥಳಿಯರ ನೆರವಿನೊಂದಿಗೆ ಹಸುವಿಗೆ ಚಿಕಿತ್ಸೆ ನೀಡಿದ್ದಾರೆ. ಹಸುವಿಗೆ ಏಟು ಬಿದ್ದ ಜಾಗಕ್ಕೆ ಹೊಲಿಗೆ ಹಾಕಿ ಡ್ರಿಪ್ ಹಾಕಿದ್ದಾರೆ. ಆದರೆ, ಹಸು ಉಳಿಯುವುದು ಕಷ್ಟ, 9 ಗಂಟೆ ಉಳಿದರೆ ಬದುಕುತ್ತದೆ ಇಲ್ಲವಾದರೆ ಉಳಿಯುವುದಿಲ್ಲ ಎಂದು ಹೇಳಿದ್ದಾರೆ. ಸ್ಥಳಿಯರು ನಮ್ಮ ಪ್ರಯತ್ನ ಮಾಡೋಣ ಎಂದು ಚಿಕಿತ್ಸೆ ಬಳಿಕ ಹಸುವನ್ನ ಆಟೋದಲ್ಲಿ ಮನೆಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ. ಆದರೆ, ವೈದ್ಯರು ಹೇಳಿದ 9 ಗಂಟೆ ಬಳಿಕ ಹಸು ಎದ್ದು ಓಡಾಡುತ್ತಿದ್ದು ಬದುಕುಳಿದಿದೆ. ಹಸುವನ್ನ ಉಳಿಸಲು ಹೋರಾಡಿದವರಿಗೆ ಖುಷಿಯಾಗಿದೆ…
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g