April 29, 2024

MALNAD TV

HEART OF COFFEE CITY

ನಾಯಿ ಬೊಗಳಿದ್ದಕ್ಕೆ ಯಜಮಾನನಿಗೆ ಆಸಿಡ್ ಹಾಕಿದ ಪಕ್ಕದ ಮನೆ ವ್ಯಕ್ತಿ

1 min read

ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ಆಸಿಡ್ ದಾಳಿ ನಡೆಸಿರುವ ಅಮಾನವೀಯ ಘಟನೆ ನರಸಿಂಹರಾಜಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ನಡೆದಿದೆ.

ನಾಯಿ ಮಾಲೀಕರ ಮೇಲೆ ಆಸಿಡ್ ದಾಳಿ ಮಾಡಿದ ಪಕ್ಕದ ಮನೆಯವರು ಕ್ರೌರ್ಯ ಮೆರೆದಿದ್ದಾರೆ, ತನ್ನ ಸಾಕಿದ ನಾಯಿ ಬೊಗಳಿದ್ದಕ್ಕೆ ಅದರ ಯಜಮಾನ ಸುಂದರ ನಾಯಿಗೆ ಬೈಗುಳ ಆರಂಭಿಸಿದ್ದಾನೆ, ಆದರೆ ಆತ ತಮಗೆ ಬೈಯುತ್ತಿದ್ದಾನೆ ಎಂದು ತಿಳಿದು ಪಕ್ಕದ ಮನೆಯವರು ಸುಂದರನ ಮುಖಕ್ಕೆ ಆಸಿಡ್ ಎರಚಿದ್ದಾರೆ, ಎನ್.ಆರ್.ಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ಘಟನೆ ನಡೆದಿದ್ದು ಸುಂದರ್ ರಾಜ್ ಆಸಿಡ್ ದಾಳಿಗೆ ಒಳಗಾಗಿ ಗಂಭೀರ ಪರಿಸ್ಥಿತಿ ತಲುಪಿದ್ದಾನೆ, ಆತನ ಎಡಗಣ್ಣಿಗೆ ಗಂಭೀರ ಗಾಯಗಳಾಗಿದ್ದು, ಕಣ್ಣಿನ ಪದರ ಬದಲಿಸುವಂತೆ ವೈದ್ಯರ ಸೂಚನೆ ನೀಡಿದ್ದಾರಂತೆ , ಇದೀಗ
ಗಾಯಾಳು ಸುಂದರ್ ರಾಜ್ ಶಿವಮೊಗ್ಗದ ಮೆಗ್ಹಾನ್ ಆಸ್ಪತ್ರೆಗೆ ದಾಖಲಾಗಿದ್ದು ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ, ಇತ್ತ ಸುಂದರ್ ರಾಜ್ ಮೇಲೆ ಆಸಿಡ್ ದಾಳಿದ ಮಾಡಿದ್ದ ಜೇಮ್ಸ್ ತನಗೆ ಬೈಯುತ್ತಿದ್ದಾನೆಂದು ತಿಳಿದು ಸಿಟ್ಟಿನಿಂದ ಆಸಿಡ್ ನಿಂದ ದಾಳಿ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಇದೀಗ ಜೇಮ್ಸ್ ವಿರುದ್ಧ ಎನ್.ಆರ್. ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಎನ್.ಆರ್.ಪುರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!