ಮಾಂಸಕ್ಕಾಗಿ ಗಬ್ಬದ ಹಸುವಿನ ಹೊಟ್ಟೆಯಲ್ಲಿದ್ದ ಕರುವನ್ನ ಕಾಡಿಗೆಸೆದ ದುರುಳರು
1 min readಮಾಂಸಕ್ಕಾಗಿ ಹಸುವನ್ನ ಕೊಂದ ದುರುಳರು ಅದರ ಹೊಟ್ಟೆಯಲ್ಲಿದ್ದ ಕರುವನ್ನ ಕಾಡಿಗೆ ಬಿಸಾಡಿ ಹೋಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಹಳೆಕಡುಬಗೆರೆ ಗ್ರಾಮದಲ್ಲಿ ನಡೆದಿದೆ. ಮೇವಿಗೆ ಹೋಗಿದ್ದ ಹಳೆಕಡುಬಗೆರೆ ಗ್ರಾಮದ ರವೀಂದ್ರ ಎಂಬುವರಿಗೆ ಸೇರಿದ ಹಸು ಮನೆಗೆ ಬಂದಿರಲಿಲ್ಲ. ಹಸು ಗಬ್ಬದ ಹಸುವಾಗಿದ್ದು, ಮನೆಗೆ ಬಾರದ ಕಾರಣ ರವೀಂದ್ರ ಹಸುವನ್ನ ಹುಡುಕೊಂಡು ಹೋಗಿದ್ದರು. ಈ ವೇಳೆ, ಕಾಡಿನಲ್ಲಿ ಹಸುವಿನ ತಲೆ ಪತ್ತೆಯಾಗಿದೆ. ಮಗುವಂತೆ ಸಾಕಿದ್ದ ಗಬ್ಬದ ಹಸುವಿನ ಸ್ಥಿತಿ ಕಂಡು ಕಣ್ಣೀರಿಟ್ಟಿದ್ದಾರೆ. ಮಾಂಸಕ್ಕಾಗಿ ಹಸುವನ್ನ ಕೊಂದ ಕಿಡಿಗೇಡಿಗಳು ಹಸುವಿನ ಹೊಟ್ಟೆಯಲ್ಲಿದ್ದ ಹಸುಗೂಸಿನಂತಹಾ ಕರುವನ್ನ ಕಾಡಿಗೆ ಎಸೆದೆ ಹೋಗಿದ್ದಾರೆ.
ಮೇಯುತ್ತಿದ್ದ ಹಸುವನ್ನ ಕದ್ದ ಗೋಕಳ್ಳರು ಹಸುವನ್ನ ಎಲೇಕಲ್ ಕಾಡಿನ ಬಳಿ ತಂದು ಹಸುವಿನ ತಲೆಕಡಿದು, ಕರುವನ್ನ ಕಾಡಿಗೆ ಎಸೆದು ಮಾಂಸವನ್ನ ಬೇರೆಡೆ ಸಾಗಿಸಿದ್ದಾರೆ. ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿರೋ ರವೀಂದ್ರ ಈ ಕೃತ್ಯವನ್ನ ಯಾರೇ ಎಸೆದಿದ್ದರೂ ಅವರನ್ನ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಬಾಳೆಹೊನ್ನೂರು ಪೊಲೀಸರು ಹಾಗೂ ಪಶುವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g