ಪೊಲೀಸರ ಆತ್ಮಸ್ಥೈರ್ಯ ಯಾವುದೇ ಕಾರಣಕ್ಕೂ ಕುಗ್ಗುವುದಿಲ್ಲ: ಡಾ. ಜಿ ಪರಮೇಶ್ವರ್
1 min readಚಿಕ್ಕಮಗಳೂರು: ಪೊಲೀಸ್ ಹಾಗೂ ವಕೀಲರ ಸಂಘರ್ಷದ ಬಗ್ಗೆ ಗೃಹ ಸಚಿವ ಡಾ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಇಂತಹ ಬೇಕಾದಷ್ಟು ಘಟನೆ ನಡೆದರೂ ನಮ್ಮ ಪೊಲೀಸರು ಸಂಯಮದಿಂದ ವರ್ತಿಸುತ್ತಾರೆ, ಎಲ್ಲದಕ್ಕಿಂತ ಕರ್ತವ್ಯ ಮೇಲು ಎಂದು ತಿಳಿದಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಡಾ. ಜಿ ಪರಮೇಶ್ವರ್ ಯಾವುದೇ ಕಾರಣಕ್ಕೂ ನಮ್ಮ ಪೊಲೀಸರ ಆತ್ಮಸ್ಥೈರ್ಯ ಕುಗ್ಗುವುದಿಲ್ಲ,, ಆದರೆ ಶಿಸ್ತಿನ ಇಲಾಖೆ ಆಗಿರುವುದರಿಂದ ಹೆಚ್ಚು ಕಡಿಮೆ ಆಗಬಾರದು ಎಂದು ಅವರು ಹೇಳಿದರು ಇದೇ ವೇಳೆ ಮಾತನಾಡಿದ ಅವರು ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ನಾನು ಯಾವುದೇ ಪ್ರತಿಕ್ರಿಯೆ ನೀಡಿದರೂ ಅದನ್ನು ಕೋರ್ಟ್ ನಲ್ಲಿ ಪ್ರಸ್ತಾಪ ಮಾಡಲಾಗುತ್ತದೆ ಆದ್ದರಿಂದ ನಾನು ಹೆಚ್ಚು ಮಾತನಾಡುವುದಿಲ್ಲ ನಮ್ಮ ಪೊಲೀಸರು ಯಾವುದೇ ಸಂದರ್ಭದಲ್ಲೂ ಎಲ್ಲವನ್ನೂ ಎದುರಿಸಲು ಸಮರ್ಥರಿದ್ದಾರೆ ಎಂದು ಡಾ. ಪರಮೇಶ್ವರ್ ಹೇಳಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g