ನೂತನ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಅದ್ದೂರಿ ಸ್ವಾಗತ
1 min readಚಿಕ್ಕಮಗಳೂರು : ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಪ್ರಾದೇಶಿಕ ಸಾರಿಗೆ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ರಾಕೇಶ್ ರವರನ್ನು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪುಷ್ಟ ಮಾಲೆ ಹಾಕಿ ಅಭಿನಂದಿಸಿ ಸ್ವಾಗತಿಸಿದರು. ನೂತನ ಅಧಿಕಾರಿಯನ್ನು ಸ್ವಾಗತಿಸಿ ಮಾತನಾಡಿದಂತಹ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ನೂರುಲ್ಲಾಖಾನ್, ಇಲಾಖೆಗಳಲ್ಲಿ ಯಾವುದೇ ಭ್ರಷ್ಟಾಚಾರವಾದರೂ ಸರ್ಕಾರ ಇತ್ತ ಗಮನ ಕೊಡುತ್ತದೆ ಎಂಬುದಕ್ಕೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳ ಕಚೇರಿಯಲ್ಲಿ ನಡೆದ ಘಟನೆ ಸಾಕ್ಷಿ ಎಂದರು. ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಅವರ ಬಣದಿಂದ ಆರ್.ಟಿ.ಓ ಕಚೇರಿಯಲ್ಲಿ ನಡೆಯುತ್ತಿದ್ದ ಲಂಚದ ಹಾವಳಿಯ ಬಗ್ಗೆ ರಾಜ್ಯ ಸರ್ಕಾರದ ಗಮನಕ್ಕೆ ತಂದಿದ್ದು, ಇದರ ಪರಿಣಾಮದಿಂದ
ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಮಧುರರಾವ್ ಎಂಬ ಅಧಿಕಾರಿಯನ್ನ ರಾಜ್ಯ ಸರ್ಕಾರವು ‘ಪನಿಶ್ಮೆಂಟ್ ಬ್ಯೂಟಿ’ ಎಂದು ಸಕಲೇಶಪುರಕ್ಕೆ ವರ್ಗಾಯಿಸಿದ್ದಾರೆ. ರಾಜ್ಯ ಸರ್ಕಾರವು ಜಿಲ್ಲೆಗೆ ಹೊಸ ಅಧಿಕಾರಿಯನ್ನ ನೇಮಕ ಮಾಡಿರುವುದು ಒಳ್ಳೆಯ ಕೆಲಸ ಇದರಿಂದ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬಹುದು ಎಂದರು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g