May 7, 2024

MALNAD TV

HEART OF COFFEE CITY

ಮನೆ ಮಾಲೀಕ ಸಾವು, ಅಂತ್ಯ ಸಂಸ್ಕಾರಕ್ಕೆ ಹೋದಾಗ ಮನೆಗೆ ಬೆಂಕಿ

1 min read

ಕುಟುಂಬಸ್ಥರು ಸಾವನ್ನಪ್ಪಿದ್ದ ಮನೆ ಮಾಲೀಕನ ಅಂತ್ಯಸಂಸ್ಕಾರಕ್ಕೆ ತೆರಳಿದ್ದ ವೇಳೆ ಸಿಲಿಂಡರ್ ಬ್ಲಾಸ್ಟ್ ಆಗಿ ಮನೆ ಸುಟ್ಟು ಕರಕಲಾಗಿ ರಾಸುಗಳು ಸಜೀವದಹನವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಾಣೂರು ಗ್ರಾಮದಲ್ಲಿ ನಡೆದಿದೆ. ಅಜ್ಜಂಪುರ ತಾಲೂಕಿನ ಬಾಣೂರು ಗ್ರಾಮದ 65 ವರ್ಷದ ವೃದ್ಧ ಹನುಮಂತಪ್ಪ ಎಂಬುವರು ಸಾವನ್ನಪ್ಪಿದ್ದರು. ಮನೆಯವರು ಅವರ ಅಂತ್ಯಸಂಸ್ಕಾರಕ್ಕೆಂದು ಹೋಗಿದ್ದ ವೇಳೆ ಮನೆಯಲ್ಲಿದ್ದ ಗ್ಯಾಸ್‍ನಿಂದ ಅನಿಲ್ ಸೋರಿಕೆಯಾಗಿ, ಸಿಲಿಂಡರ್ ಬ್ಲಾಸ್ಟ್ ಆಗಿ ಈ ದುರ್ಘಟನೆ ಸಂಭವಿಸಿದೆ. ಸಿಲಿಂಡರ್ ಬ್ಲಾಸ್ಟ್‍ನಿಂದ ಅಕ್ಕಪಕ್ಕದ ಎರಡು ಶೀಟ್ ಮನೆ ಹಾಗೂ ಮನೆ ಪಕ್ಕದ ಕೊಟ್ಟಿಗೆಯಲ್ಲಿ ಕಟ್ಟಿದ್ದ ಎರಡು ಹಸು ಹಾಗೂ ಒಂದು ಕುರಿ ಸಜೀವದಹನವಾಗಿವೆ.

 

ಬೆಂಕಿ ಅವಘಡದಿಂದ ಶೀಟ್ ಮನೆ ಹಾಗೂ ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಸಂಪೂರ್ಣ ಸುಟ್ಟುಕರಕಲಾಗಿವೆ. ಗ್ರಾಮದಲ್ಲಿ ಜನ ಕೂಡ ಅಂತ್ಯಸಂಸ್ಕಾರಕ್ಕೆ ತೆರಳಿದ್ದ ಕಾರಣ ಗ್ರಾಮದಲ್ಲಿದ್ದ ಕೆಲ ಸ್ಥಳಿಯರು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಆದರೆ, ಸಿಲಿಂಡರ ಬ್ಲಾಸ್ಟ್ ಆದ ಪರಿಣಾಮ ಮನೆ, ಕೊಟ್ಟಿಗೆ, ರಾಸುಗಳು ಎಲ್ಲವೂ ಹೊತ್ತಿ ಉರಿದಿದೆ. ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನ ನಂದಿಸಿದ್ದಾರೆ. ಅಜ್ಜಂಪರು ಪೊಲೀಸರು ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!