May 5, 2024

MALNAD TV

HEART OF COFFEE CITY

ಟೈಟಾಗಿ ಮನವಿ ಪತ್ರ ನೀಡಲು ಬಂದ ಪ್ರಿನ್ಸಿಪಾಲ್, ಆಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ಕಳಿಸಿದ ಶಾಸಕ

1 min read

 

ಮದ್ಯಪಾನ ಮಾಡಿ ಫುಲ್ ಟೈಟಾಗಿ ಶಾಸಕರಿಗೆ ಮನವಿ ಪತ್ರ ನೀಡಲು ಬಂದ ಪ್ರಾಂಶುಪಾಲರಿಗೆ ಶಾಸಕರು ರಸ್ತೆ ಮಧ್ಯೆಯೇ ಕ್ಲಾಸ್ ತೆಗೆದುಕೊಂಡು ಆಸ್ಪತ್ರೆಗೆ ಕಳಿಸಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸಂಸೆ ಗ್ರಾಮದಲ್ಲಿ ನಡೆದಿದೆ. ಎನ್.ಆರ್.ಪುರ ತಾಲೂಕಿನ ಸಂಸೆ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ಲೋಕ ನಾಯಕ್ ವಸತಿ ಶಾಲೆಯ ಸಮಸ್ಯೆಗಳ ಬಗ್ಗೆ ಶಾಸಕ ಟಿ.ಡಿ. ರಾಜೇಗೌಡರಿಗೆ ಮನವಿ ನೀಡಲು ಆಗಮಿಸಿದ್ದರು. ಈ ವೇಳೆ, ಪ್ರಿನ್ಸಿಪಾಲ್ ಲೋಕನಾಯಕ್ ಫುಲ್ ಟೈಟ್ ಆಗಿರುವುದನ್ನ ಕಂಡ ಶಾಸಕ ರಸ್ತೆ ಮಧ್ಯೆಯೇ ಫುಲ್ ಗರಂ ಆಗಿದ್ದರು. ಸ್ಥಳದಲ್ಲೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ಪ್ರಿನ್ಸಿಪಾಲರನ್ನು ಅಮಾನತ್ತು ಮಾಡುವಂತೆ ಒತ್ತಾಯಿಸಿದರು. ಅಷ್ಟೆ ಅಲ್ಲದೆ ಬ್ರೀಥಿಂಗ್ ಆಲ್ಕೋಹಾಲ್ ಆನ್ ಲೇಸರ್ ಮೂಲಕ ಪ್ರಾಂಶುಪಾಲರನ್ನು ತಪಾಸಣೆ ನಡೆಸಿ ಮದ್ಯಪಾನ ಮಾಡಿದ್ದು ಪತ್ತೆಯಾದ ಹಿನ್ನೆಲೆ ಶಿಕ್ಷಕರೇ ಹೀಗೆ ವರ್ತಿಸಿದರೆ ಮಕ್ಕಳ ಪಾಡೇನು ಎಂದು ಅಸಮಾಧಾನ ಹೊರಹಾಕಿದ್ದಾರೆ. ಕೂಡಲೇ, ಸರ್ಕಾರಿ ಆಸ್ಪತ್ರೆಗೆ ಫೋನ್ ಮಾಡಿ ಆಂಬುಲೆನ್ಸ್ ಕರೆಸಿ ಪ್ರಿನ್ಸಿಪಾಲ್ ಲೋಕ ನಾಯಕ್ ಅವರನ್ನು ವೈದ್ಯಕೀಯ ಪರೀಕ್ಷೆಗೆಂದು ಎನ್.ಆರ್. ಪುರ ಸರ್ಕಾರಿ ಆಸ್ಪತ್ರೆಗೆ ಕಳಿಸಿದ್ದಾರೆ.‌ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 6 ರಿಂದ 10ನೇ ತರಗತಿವರೆಗೆ ಪ್ರಸ್ತುತ 240 ಜನ ಹೆಣ್ಣು ಮಕ್ಕಳಿದ್ದಾರೆ. ಈಗ ಮತ್ತೆ ಹೊಸದಾಗಿ 40 ಜನ ಬರುವವರು ಇದ್ದಾರೆ. ಹಾಸ್ಟೆಲ್ ನಲ್ಲಿ ವಾರ್ಡನ್ ಯಾರು ಇಲ್ಲ. ವಾರ್ಡನ್ ಹಾಗೂ ಪ್ರಿನ್ಸಿಪಾಲ್ ಎರಡು ಹುದ್ದೆಯನ್ನು ಲೋಕ ನಾಯಕ್ ಅವರೇ ನಿರ್ವಹಿಸುತ್ತಿದ್ದಾರೆ.‌ ಸುಮಾರು 300 ಜನ ಹೆಣ್ಣು ಮಕ್ಕಳಿರುವ ವಸತಿ ಶಾಲೆಯಲ್ಲಿ ಇಂತಹ ಪ್ರಿನ್ಸಿಪಾಲ್ ಇದ್ದರೆ ಹೆಣ್ಣು ಮಕ್ಕಳ ಗತಿಯೆಂದು ಶಾಸಕ ರಾಜೇಗೌಡ ಪ್ರಿನ್ಸಿಪಾಲ್ ವಿರುದ್ಧ ಅಸಮಾಧಾನ ಅವರ ಹಾಕಿ ಕೂಡಲೇ ಅಮಾನತ್ತು ಮಾಡುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.‌

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!