ಕಾಫಿನಾಡಲ್ಲಿ ಮಳೆ ಅಬ್ಬರ, ರಸ್ತೆಯಲ್ಲಿ ನದಿಯಂತೆ ಹರಿದ ನೀರು
1 min readಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಬಿಡುವು ನೀಡಿದ್ದ ವರುಣದೇವ ಇಂದು ಮತ್ತೆ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಜಿಲ್ಲೆಯ ಮಲೆನಾಡು ಭಾಗವಾದ ಮೂಡಿಗೆರೆ, ಶೃಂಗೇರಿ, ಕಳಸ, ಕೊಪ್ಪ ಹಾಗೂ ಎನ್.ಆರ್.ಪುರ ಭಾಗದಲ್ಲಿ ಮತ್ತೆ ಮಳೆರಾಯ ಧಾರಾಕಾರವಾಗಿ ಸುರಿದಿದ್ದಾನೆ. ಮಲೆನಾಡ ಕೆಲ ಭಾಗದಲ್ಲಿ ಸಾಧಾರಣ ಮಳೆ ಸುರಿದರೆ ಹಲವೆಡೆ ಭಾರೀ ಮಳೆಯಾಗಿದೆ. ಎನ್.ಆರ್.ಪುರ ತಾಲೂಕಿನಲ್ಲಿ ಸುಮಾರು ಒಂದು ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆಯಿಂದಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಬಿಡುವು ನೀಡಿದ್ದ ವರುಣದೇವ ಇಂದು ಮತ್ತೆ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಜಿಲ್ಲೆಯ ಮಲೆನಾಡು ಭಾಗವಾದ ಮೂಡಿಗೆರೆ, ಶೃಂಗೇರಿ, ಕಳಸ, ಕೊಪ್ಪ ಹಾಗೂ ಎನ್.ಆರ್.ಪುರ ಭಾಗದಲ್ಲಿ ಮತ್ತೆ ಮಳೆರಾಯ ಧಾರಾಕಾರವಾಗಿ ಸುರಿದಿದ್ದಾನೆ. ಮಲೆನಾಡ ಕೆಲ ಭಾಗದಲ್ಲಿ ಸಾಧಾರಣ ಮಳೆ ಸುರಿದರೆ ಹಲವೆಡೆ ಭಾರೀ ಮಳೆಯಾಗಿದೆ. ಎನ್.ಆರ್.ಪುರ ತಾಲೂಕಿನಲ್ಲಿ ಸುಮಾರು ಒಂದು ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಎನ್.ಆರ್.ಪುರ ಪಟ್ಟಣದ ಮುಖ್ಯ ರಸ್ತೆಯಲ್ಲಿ ರಸ್ತೆ ಮೇಲೆ ಸುಮಾರು ಎರಡು ಅಡಿಯಷ್ಟು ನೀರು ನಿಂತಿತ್ತು. ಧಾರಾಕಾರವಾಗಿ ಸುರಿದ ಮಳೆಯಿಂದ ರಸ್ತೆ ಮೇಲೆ ನೀರು ನದಿಯಂತೆ ಹರಿದಿದೆ. ರಸ್ತೆ ಮೇಲೆ ಹರಿಯುತ್ತಿದ್ದ ನೀರಿನ ಮೇಲೆ ಬೈಕ್ ಸಾವರರು ಸಂಚರಿಸಲಾಗದೆ ನೀರಿನಲ್ಲಿ ಸಿಕ್ಕಿಬಿದ್ದಿದ್ದರು. ಕಾರಿನಲ್ಲಿ ಸಂಚರಿಸುವವರ ಕಾರಿನ ಚಕ್ರಗಳು ಸುಮಾರು ಅರ್ಧದಷ್ಟು ಮುಳುಗುವ ಮಟ್ಟಕ್ಕೆ ನೀರು ನಿಂತಿತ್ತು. ಎನ್.ಆರ್.ಪುರ ತಾಲೂಕು ಕಚೇರಿಯ ರಸ್ತೆಯಲ್ಲಿ ಸುಮಾರು ಎರಡು ಕಿ.ಮೀ. ರಸ್ತೆ ಮೇಲೆ ನದಿಯಂತೆ ನೀರು ನಿಂತಿತ್ತು. ಏಕಾಏಕಿ ಸುರಿದ ಭಾರೀ ಮಳೆಯಿಂದ ಜನಜೀವನ ಕೂಡ ಅಸ್ತವ್ಯಸ್ತಗೊಂಡಿತ್ತು. ಎನ್.ಆರ್.ಪುರ ತಾಲೂಕಿನಲ್ಲಿ ಅಡಿಕೆಯನ್ನ ಹೆಚ್ಚಾಗಿ ಬೆಳೆಯುತ್ತಿದ್ದು ನಿರಂತರ ಅಕಾಲಿಕ ಮಳೆಯಿಂದ ತೋಟಗಳಲ್ಲಿ ನೀರು ನಿಂತಿದ್ದು ಅಡಿಕೆಗೆ ಕೊಳೆ ರೋಗದ ಭೀತಿಯಲ್ಲಿ ಬೆಳೆಗಾರರಿದ್ದಾರೆ. ಇನ್ನು ಕಳಸ, ಕೊಪ್ಪ, ಶೃಂಗೇರಿ ಭಾಗದಲ್ಲೂ ಹೆಚ್ಚಾಗಿ ಅಡಿಕೆಯನ್ನ ಬೆಳೆಯುತ್ತಾರೆ. ಕಳೆದ ಹದಿನೈದು ದಿನದಿಂದ ಆಗಾಗ್ಗೆ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಅಡಿಕೆ ಬೆಳೆಗಾರರು ಹೈರಾಣಾಗಿದ್ದಾರೆ. ಅಡಿಕೆ ತೋಟದಲ್ಲಿ ಅಡಿಯಷ್ಟು ಎತ್ತರಕ್ಕೆ ನೀರು ನಿಲ್ಲುತ್ತಿರುವುದರಿಂದ ಅಡಿಕೆಗೆ ಕೊಳೆ ರೋಗದ ಭೀತಿ ಇಡೀ ಜಿಲ್ಲೆಯನ್ನ ಕಾಡುತ್ತಿದೆ. ಈಗಾಗಲೇ ಕೆಲ ತೋಟದಲ್ಲಿ ಶೀಥ ಹೆಚ್ಚಾಗಿ ಅಡಿಕೆ ನೆಲಕ್ಕುದುರುವ ಸ್ಥಿತಿ ನಿರ್ಮಾಣವಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಎನ್.ಆರ್.ಪುರ ಪಟ್ಟಣದ ಮುಖ್ಯ ರಸ್ತೆಯಲ್ಲಿ ರಸ್ತೆ ಮೇಲೆ ಸುಮಾರು ಎರಡು ಅಡಿಯಷ್ಟು ನೀರು ನಿಂತಿತ್ತು. ಧಾರಾಕಾರವಾಗಿ ಸುರಿದ ಮಳೆಯಿಂದ ರಸ್ತೆ ಮೇಲೆ ನೀರು ನದಿಯಂತೆ ಹರಿದಿದೆ. ರಸ್ತೆ ಮೇಲೆ ಹರಿಯುತ್ತಿದ್ದ ನೀರಿನ ಮೇಲೆ ಬೈಕ್ ಸಾವರರು ಸಂಚರಿಸಲಾಗದೆ ನೀರಿನಲ್ಲಿ ಸಿಕ್ಕಿಬಿದ್ದಿದ್ದರು. ಕಾರಿನಲ್ಲಿ ಸಂಚರಿಸುವವರ ಕಾರಿನ ಚಕ್ರಗಳು ಸುಮಾರು ಅರ್ಧದಷ್ಟು ಮುಳುಗುವ ಮಟ್ಟಕ್ಕೆ ನೀರು ನಿಂತಿತ್ತು. ಎನ್.ಆರ್.ಪುರ ತಾಲೂಕು ಕಚೇರಿಯ ರಸ್ತೆಯಲ್ಲಿ ಸುಮಾರು ಎರಡು ಕಿ.ಮೀ. ರಸ್ತೆ ಮೇಲೆ ನದಿಯಂತೆ ನೀರು ನಿಂತಿತ್ತು. ಏಕಾಏಕಿ ಸುರಿದ ಭಾರೀ ಮಳೆಯಿಂದ ಜನಜೀವನ ಕೂಡ ಅಸ್ತವ್ಯಸ್ತಗೊಂಡಿತ್ತು. ಎನ್.ಆರ್.ಪುರ ತಾಲೂಕಿನಲ್ಲಿ ಅಡಿಕೆಯನ್ನ ಹೆಚ್ಚಾಗಿ ಬೆಳೆಯುತ್ತಿದ್ದು ನಿರಂತರ ಅಕಾಲಿಕ ಮಳೆಯಿಂದ ತೋಟಗಳಲ್ಲಿ ನೀರು ನಿಂತಿದ್ದು ಅಡಿಕೆಗೆ ಕೊಳೆ ರೋಗದ ಭೀತಿಯಲ್ಲಿ ಬೆಳೆಗಾರರಿದ್ದಾರೆ. ಇನ್ನು ಕಳಸ, ಕೊಪ್ಪ, ಶೃಂಗೇರಿ ಭಾಗದಲ್ಲೂ ಹೆಚ್ಚಾಗಿ ಅಡಿಕೆಯನ್ನ ಬೆಳೆಯುತ್ತಾರೆ. ಕಳೆದ ಹದಿನೈದು ದಿನದಿಂದ ಆಗಾಗ್ಗೆ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಅಡಿಕೆ ಬೆಳೆಗಾರರು ಹೈರಾಣಾಗಿದ್ದಾರೆ. ಅಡಿಕೆ ತೋಟದಲ್ಲಿ ಅಡಿಯಷ್ಟು ಎತ್ತರಕ್ಕೆ ನೀರು ನಿಲ್ಲುತ್ತಿರುವುದರಿಂದ ಅಡಿಕೆಗೆ ಕೊಳೆ ರೋಗದ ಭೀತಿ ಇಡೀ ಜಿಲ್ಲೆಯನ್ನ ಕಾಡುತ್ತಿದೆ. ಈಗಾಗಲೇ ಕೆಲ ತೋಟದಲ್ಲಿ ಶೀಥ ಹೆಚ್ಚಾಗಿ ಅಡಿಕೆ ನೆಲಕ್ಕುದುರುವ ಸ್ಥಿತಿ ನಿರ್ಮಾಣವಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g