May 2, 2024

MALNAD TV

HEART OF COFFEE CITY

ನನ್ನ ಮಗನ ಮೊಬೈಲ್, ವಾಚ್ ಹಾಗೂ ಹೆಲ್ಮೇಟ್ ಹುಡುಕಿಕೊಡಿ ಎಂದು ಪೊಲೀಸರ ಬಳಿ ಮನವಿ ಮಾಡಿದ ಯೋಧನ ಪೋಷಕರು

1 min read

ಚಿಕ್ಕಮಗಳೂರು : ಎದೆ ಮಟ್ಟದ ಸೈನಿಕ ಮಗನನ್ನ ಕಳೆದುಕೊಂಡ ಹೆತ್ತವರು ಪೊಲೀಸರ ಬಳಿ ಸೈನಿಕನ ಮೂರು ವಸ್ತುಗಳನ್ನ ಕೇಳಿದ್ದಾರೆ. ಅದು ಅವನ ಕೊರಳಿದ್ದ ಸರ್, ಕೈಯಲ್ಲಿದ್ದ ಉಂಗುರ, ಜೇಬಲ್ಲಿದ್ದ ಹಣವನ್ನಲ್ಲ. ಸ್ವಾಮಿ, ನನ್ನ ಮಗನ ಮೊಬೈಲ್, ವಾಚ್ ಹಾಗೂ ಹೆಲ್ಮೇಟ್ ಕೊಡಿ ಅಂತ ಅಷ್ಟೆ. ಆದ್ರೆ, ಸಮಾಜದ ಸೈನಿಕರು ನಾವೇನು ಹುಡುಕ್ಕಂಡ್ ಹೋಗಕ್ಕೆ ಆಗುತ್ತೇನ್ರಿ ಅಂತ ಕೈತೊಳೆದುಕೊಂಡಿದ್ದಾರೆ. ಹೌದು, ಈತನ ಹೆಸ್ರು ದೀಪಕ್. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸಮೀಪದ ತಣಿಗೆಬೈಲು ನಿವಾಸಿ. ಎನ್.ಎಸ್.ಜಿ. ಬ್ಲ್ಯಾಕ್ ಕ್ಯಾಟ್ ಕಮಾಂಡೋ. 2018ರಲ್ಲಿ ಸೇನೆಗೆ ಸೇರಿದ ಈತ ನಾಲ್ಕೇ ವರ್ಷಕ್ಕೆ ಬ್ಲ್ಯಾಕ್ ಕ್ಯಾಟ್ ಕಮಾಂಡೋ ಆಗಿದ್ದ. 2020ರಲ್ಲಿ ಮದ್ವೆ ಕೂಡ ಆಗಿತ್ತು. ರಜೆ ಮೇಲೆ ಊರಿಗೆ ಬಂದಿದ್ದ ದೀಪಕ್ ಡ್ಯೂಟಿಗೆ ವಾಪಸ್ ಹೋಗುವಾಗ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಯಡಿಯೂರು ಸಮೀಪದ ಹೇಮಾವತಿ ಕ್ರಾಸ್ ಬಳಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದರು. ಸೇನೆಯ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ಕೂಡ ಮುಗಿದಿದೆ. ಆದರೆ, ಸಾವು ಇಂದಿಗೂ ನಿಗೂಢವಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿದರು ಅನ್ನೋದು ಹೇಗೆ, ಯಾವ ವಾಹನ ಅನ್ನೋದು ಇಂದಿಗೂ ನಿಗೂಢ. ಹಾಗಾಗಿ, ಮೃತ ದೀಪಕ್ ಪೋಷಕರು ನಮ್ಮ ಮಗನೇ ಹೋದ. ಆತನ ಮೈಮೇಲಿದ್ದ ಚಿನ್ನ-ದುಡ್ಡು ಯಾವ್ದು ಬೇಡ. ಆತನ ಮೊಬೈಲ್, ವಾಚ್, ಹೆಲ್ಮೇಟ್ ಕೊಡಿ ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ. ಮೊಬೈಲ್ನಲ್ಲಿ ಆರ್ಮಿಯ ಸೀಕ್ರೇಟ್ ಕೋಡ್ ಇದೆ ಎಂದು ಹೇಳುತ್ತಿದ್ದ, ಹೆಲ್ಮೇಟ್ನಲ್ಲಿ ಕ್ಯಾಮರಾ ಇದೆ. ಅವನ ಸಾವಿಗೆ ಕಾರಣವಾದ್ರು ಗೊತ್ತಾಗಬಹುದು. ದಯವಿಟ್ಟು ಹೆಲ್ಮೇಟ್ ಕೊಡಿ ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!