ಶಿಕ್ಷಕಿಯ ಮಾಂಗಲ್ಯ ಸರ ಕದ್ದು ಎಸ್ಕೇಪ್ ಆಗಿದ್ದ ಜಿ. ಪಂ. ಮಾಜಿ ಅಧ್ಯೆಕ್ಷೆ ಮಗ ಅಂದರ್
1 min readಚಿಕ್ಕಮಗಳೂರು: ಶಿಕ್ಷಕಿಯ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಪ್ರಕರಣದಲ್ಲಿ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯೆಕ್ಷೆಯ ಮಗನ ಬಂಧಿಸಲಾಗಿದೆ. ಹಾಡಹಗಲೇ ಶಿಕ್ಷಕಿಯೊಬ್ಬರ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಕಳ್ಳನನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶಾಂತಿಪುರದ ಕೆ.ಎಸ್. ಶ್ರೇಯಸ್ ಬಂಧಿತ ಆರೋಪಿಯಾಗಿದ್ದು, ಆಗಸ್ಟ್ 4 ರಂದು ಸುರತ್ಕಲ್’ನ ವಿದ್ಯಾದಾಯಿನಿ ಫ್ರೌಡಶಾಲೆಯ ಶಿಕ್ಷಕಿ ವಿದ್ಯಾ ಅವರು ಮನೆಯಿಂದ ಸ್ಕೂಲಿಗೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಶ್ರೇಯಸ್ ವಿದ್ಯಾ ಅವರ ಕುತ್ತಿಗೆಯಲ್ಲಿದ್ದ 16 ಗ್ರಾಂ ಬಂಗಾರದ ಸರವನ್ನು ಕಸಿದು ಪರಾರಿಯಾಗಿದ್ದ. ಶೀಘ್ರ ಕಾರ್ಯಾಚರಣೆ ಮಾಡಿದ ಸುರತ್ಕಲ್ ಪೊಲೀಸರು ಆರೋಪಿಯ ಜಾಡು ಹಿಡಿದು ಬಂಧಿಸಿ ಯಶಸ್ವಿಯಾಗಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g