ಕಂದಾಯ ಸಚಿವರು ನೀಡಿರುವ ಹೇಳಿಕೆ ಚುನಾವಣೆ ಗಿಮಿಕ್
1 min readಚಿಕ್ಕಮಗಳೂರು: ಒತ್ತುವರಿ ಭೂಮಿ ಗುತ್ತಿಗೆ ಆಧಾರದ ಮೇಲೆ ನೀಡುವುದಾಗಿ ಕಂದಾಯ ಸಚಿವರು ನೀಡಿರುವ ಹೇಳಿಕೆ ಚುನಾವಣೆ ಗಿಮಿಕ್ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್. ದೇವರಾಜ್ ಆರೋಪಿಸಿದರು.
ನಗರದ ಹನುಮಂತಪ್ಪ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿ ಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಚಿಕ್ಕಮಗಳೂರು, ಹಾಸನ ಮತ್ತು ಮಡಕೇರಿಯಲ್ಲಿ ಕಂದಾಯಭೂಮಿ ಒತ್ತುವರಿಯಾಗಿದೆ. ಈ ಭೂಮಿ ಉಳ್ಳವರ ಪಾಲಾಗಿದೆ. ಒತ್ತುವರಿ ತೆರವುಗೊಳಿಸಿ ಸ್ಮಾಶನ, ಶಾಲೆ, ಆರೋಗ್ಯ ಕೇಂದ್ರ ಸೇರಿದಂತೆ ಸಾರ್ವಜನಿಕರ ಉಪಯೋಗಕ್ಕೆ ಮೀಸಲಿಡುವಂತೆ ಹಾಗೂ ನಿವೇಶನ ರಹಿತರು ಮತ್ತು ಭೂ ರಹಿತರಿಗೆ ನೀಡುವಂತೆ ಆಗ್ರಹಿಸಿದರು.
ನಮೂನೆ 53 ಅರ್ಜಿಗಳ ಸಲ್ಲಿಕೆ ಅವಧಿಯನ್ನು ಸರ್ಕಾರ ಒಂದುವರ್ಷ ಮುಂದೂಡಿದೆ. ಜಿಲ್ಲೆಯಲ್ಲಿ ಅಕ್ರಮ, ಸಕ್ರಮ ಸಮಿತಿ ಸಭೆಯಾಗಿಲ್ಲ, ವರ್ಷದಲ್ಲಿ ಅರ್ಜಿಗಳು ವಿಲೇವಾರಿ ಯಾಗಿಲ್ಲ, ಆದರೆ ಬಿಜೆಪಿಯವರು ಭಾವನಾತ್ಮಕವಾಗಿ ಜನರ ಮನಸ್ಸನ್ನು ಕೆರೆಳಿಸುತ್ತಿದ್ದು, ಜನರ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತಿಲ್ಲವೆಂದು ಆರೋಪಿಸಿದರು.
ರಾಜ್ಯದಲ್ಲಿ ಯಾವುದೇ ಘಟನೆ ನಡೆದರೇ ಕಾಂಗ್ರೆಸ್ ಪಕ್ಷವನ್ನೇ ಬಿಜೆಪಿಯವರು ಹೊಣೆ ಗಾರರನ್ನಾಗಿಸುತ್ತಿದ್ದಾರೆ. ಇದೇ ಪ್ರವೃತ್ತಿ ಮುಂದುವರೆದರೆ ಪ್ರತೀ ವಿಚಾರವನ್ನು ಕೈಗೆತ್ತಿ ಕೊಂಡು ಬಿಜೆಪಿ ವಿರುದ್ಧ ಪ್ರತಿಭಟಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮುಖಂಡ ರವೀಶ್ ಕ್ಯಾತನಬೀಡು ಮಾತನಾಡಿ, ಬಸವಣ್ಣನವರ ಬಗ್ಗೆ ಹಗುರವಾಗಿ ಮಾತನಾಡಿರುವ ಶಾಸಕ ಸಿ.ಟಿ.ರವಿ ಬೇಷರತ್ ಕ್ಷಮೆಯಾಚಿಸದಿದ್ದರೆ ಬಸವಣ್ಣನವರ ಭಾವಚಿತ್ರದೊಂದಿಗೆ ಶಾಸಕರ ಮನೆ ಮುಂದೇ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದoರು.
ಕಾಂಗ್ರೆಸ್ ಮಹಿಳಾ ವಿಭಾಗದ ರಾಜ್ಯ ಉಪಾಧ್ಯಕ್ಷೆ ರೇಖಾಹುಲಿಯಪ್ಪಗೌಡ ಮಾತ ನಾಡಿ, ರಾಜ್ಯದಲ್ಲಿ ಆಪರೇಷನ್ ಕಮಲದ ಪಾಪದ ಕೂಸು ರಾಜ್ಯ ಸರ್ಕಾರವಾಗಿದೆ. ಅಧಿ ಕಾರದ ಲಾಲಾಸೆಗೆ ಬಿಜೆಪಿ ಒಳಗಾಗಿದ್ದು, ಮಹಾರಾಷ್ಟ್ರದಲ್ಲಿ ಇದು ಸಾಬೀತಾ ಗಿದೆ. ಅಧಿಕಾರ ದುರುಪಯೋಗ ಪಡಿಸಿಕೊಂಡು ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡು ತ್ತಿದೆ ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ಎಂ.ಎಲ್.ಮೂರ್ತಿ ಸೇರಿದಂತೆ ಅನೇಕರು ಇದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g