ಪಾಳುಬಿದ್ದ ಕಟ್ಟಡದಲ್ಲಿ ಯುವಕನ ಅನುಮಾನಸ್ಪದ ಸಾವು ಕೊಲೆ ಶಂಕೆ
1 min readಚಿಕ್ಕಮಗಳೂರು : ಪಾಳುಬಿದ್ದ ಕಟ್ಟಡದಲ್ಲಿ ಯುವಕ ಅನುಮಾನಾಸ್ಪದವಾಗಿ ಸಾವನಪ್ಪಿರುವ ಘಟನೆ ಕದ್ರಿಮಿದ್ರಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಕದ್ರಿಮಿದ್ರಿ ಗ್ರಾಮದಲ್ಲಿ ಇರುವ ಜಿಲ್ಲಾ ಒಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ಸೇರಿದ ಪಾಳು ಬಿದ್ದ ಕಟ್ಟಡದಲ್ಲಿ ಶವವು ದೊರಕಿದ್ದು, ಮೂರ್ನಾಲ್ಕು ದಿನದ ಹಿಂದೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸಾವನಪ್ಪಿರುವ ಸ್ಥಳದಲ್ಲಿ ರಕ್ತದ ಕಲೆಗಳು ಪತ್ತೆಯಾಗಿದೆ. ಮೃತನು ಗೌಡನಹಳ್ಳಿ ಗ್ರಾಮದ ಗಾರೆ ಮೇಸ್ತ್ರಿ ಕೆಲಸ ಮಾಡುತ್ತಿದ್ದ 27 ವರ್ಷದ ಕುಮಾರ್ ಎಂದು ತಿಳಿದು ಬಂದಿದ್ದು, ಪ್ರಕರಣವು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕುಮಾರ್ನ ಸಾವಿನಿಂದ ಕುಟುಂಬದವರು ರೋದಿಸುತ್ತಿದ್ದರು. ಕೊಲೆ ನಡೆದಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದು, ತನಿಖೆಯಿಂದಷ್ಟೇ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ತಿಳಿಯಬೇಕಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://www.youtube.com/channel/UCmBISI2sn_0gamb44UFj-vQ
Credits:
Music : latest 2020 6 different no copyright news background music, royalty free (black mart)
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g