ಬೆಂಗಳೂರಿನಿಂದ ಟ್ರಕ್ಕಿಂಗ್ ಬಂದಿದ್ದ ಯುವಕ ಮಿಸ್ಸಿಂಗ್..!
1 min readಕೊಟ್ಟಿಗೆಹಾರ: ಬೆಂಗಳೂರಿನಿಂದ ಟ್ರಕ್ಕಿಂಗ್ ಬಂದಿದ್ದ ಯುವಕನೊಬ್ಬ ರಾಣಿಝರಿ ಪಾಯಿಂಟ್ ನಲ್ಲಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದಾನೆ. ಭರತ್ ನಾಪತ್ತೆಯಾದ ಯುವಕ. ಭರತ್ ಬಿ.ಇ ಮುಗಿಸಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಕಂಪೆನಿ ಅವರನ್ನು 3 ತಿಂಗಳ ಸಂಬಳ ನೀಡಿ ಕೆಲಸದಿಂದ ತೆಗೆದು ಹಾಕಿದೆ. ಇದರಿಂದ ಭರತ್ ತನ್ನ ಬೈಕ್ ನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿ ರಾಣಿಝರಿ ಪಾಯಿಂಟ್ ಬಂದಿದ್ದರು.
ಮಗನ ಬರುವಿಕೆಗೆ ಕಾದು ಕುಳಿತ ಪೋಷಕರು, ಮಗನನ್ನು ಹುಡುಕಿಕೊಂಡು ಚಿಕ್ಕಮಗಳೂರಿಗೆ ಬಂದಿದ್ದಾರೆ. ಇತ್ತ ರಾಣಿಝರಿ ಪಾಯಿಂಟ್ ನಲ್ಲಿ ಭರತ್ ತನ್ನ ಬೈಕ್ ನಿಲ್ಲಿಸಿದ್ದು,ಗುಡ್ಡದ ತುದಿಯಲ್ಲಿ ಟೀ ಶರ್ಟ್, ಮೊಬೈಲ್, ಸ್ಲಿಪರ್ ಪತ್ತೆಯಾಗಿದೆ. ಅನುಮಾನಗೊಂಡಿರುವ ಬಾಳೂರು ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿಯಿಂದ ಭರತ್ ಗಾಗಿ ಹುಡುಕಾಟ ಶುರು ಮಾಡಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g