ರಾಜ್ಯ ಸರ್ಕಾರ ಕಾರ್ಮಿಕರಿಗೆ ನೀಡಿರುವ ಕಿಟ್ಟ್ ಗಳಲ್ಲಿ ಯಾವುದೇ ದುರುಪಯೋಗವಾಗಿಲ್ಲ : ವರಸಿದ್ದಿ ವೇಣುಗೋಪಾಲ್
1 min readಚಿಕ್ಕಮಗಳೂರು : ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ನೀಡುತ್ತಿರುವ ಆಹಾರದ ಕಿಟ್ಗಳನ್ನು ಕಟ್ಟಡ ಕಾರ್ಮಿಕರಿಗೆ ಬಿಜೆಪಿಯು ಸಮರ್ಪಕವಾಗಿ ವಿತರಣೆ ಮಾಡುತ್ತಿದೆ ಎಂದು ಜಿಲ್ಲಾ ವಕ್ತಾರ ವರಸಿದ್ಧಿ ವೇಣುಗೋಪಾಲ್ ತಿಳಿಸಿದ್ದಾರೆ.
ಕಾರ್ಮಿಕರ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ನೀಡುತ್ತಿರುವ ಆಹಾರದ ಕಿಟ್ಗಳ ದುರುಪಯೋಗವಾಗಿದೆ ಎಂದು ಕಾಂಗ್ರೆಸ್ ಸುಳ್ಳು ಹೇಳುತ್ತಿದೆ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದರು. ಈ ಹಿಂದೆಯೂ ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ಹಾಕುವ ಸಂದರ್ಭದಲ್ಲೂ ಅಪಪ್ರಚಾರ ಮಾಡಿ ಸಾರ್ವಜನಿಕರು ಲಸಿಕೆ ಪಡೆಯುವುದನ್ನು ತಡೆಯುವ ಹುನ್ನಾರ ನಡೆಸಿದರು. ಆದರೆ ಕಾಂಗ್ರೆಸ್ಸಿನ ಮುಖಂಡರುಗಳು ಮಾತ್ರ ಲಸಿಕೆ ಹಾಕುವ ಕೇಂದ್ರದಲ್ಲಿ ಅವರೇ ಮೊದಲಿಗೆ ನಿಂತು ಲಸಿಕೆ ಹಾಕಿಸಿಕೊಂಡು ಸಾರ್ವಜನಿಕರಿಗೆ ಮೋಸ ಮಾಡಿದ್ದಾರೆ. ಅದೇ ರೀತಿ ಆಹಾರ ಪದಾರ್ಥದ ಕಿಟ್ ವಿತರಣೆಯಲ್ಲೂ ದುರುಪಯೋಗವಾಗಿದೆ ಎಂದು ಸುಳ್ಳು ಹೇಳಿ ಕಾರ್ಮಿಕರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ, ಇದು ಫಲಿಸುವುದಿಲ್ಲ. ಕಾಂಗ್ರೆಸ್ಸಿನ ಕೆಲ ಪುಡಾರಿಗಳು ಕಾರ್ಮಿಕರ ಕಿಟ್ ನ್ನು ನಮ್ಮ ಕಾರ್ಯಕರ್ತರಿಗೆ ಸಿಗುತ್ತಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.
ಜಿಲ್ಲೆಯಲ್ಲಿ ಕಾರ್ಮಿಕರ ಇಲಾಖೆಯಲ್ಲಿ ನೊಂದಾಯಿತರಾಗಿರುವ ಕಾರ್ಮಿಕರಿಗೆ ಆಹಾರದ ಕಿಟ್ಟ್ಗಳನ್ನು ಅವರು ಇರುವ ಸ್ಥಳದಲ್ಲೇ ಅವರವರ ಮನೆಗೆ ಖುದ್ದಾಗಿ ತಲುಪಿಸುವಂತ ವ್ಯವಸ್ಥೆ ಕಾರ್ಮಿಕ ಇಲಾಖೆಯಿಂದ ಮಾಡಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಒಟ್ಟು ೫೦ ಸಾವಿರಕ್ಕೂ ಅಧಿಕ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿತರಾಗಿದ್ದಾರೆ. ಇವರೆಲ್ಲರಿಗೂ ಕಾರ್ಮಿಕ ಇಲಾಖೆಯಿಂದ, ಸರ್ಕಾರದಿಂದ ಆಹಾರ ಪದಾರ್ಥದ ಕಿಟ್ ಮನೆಗಳಿಗೆ ತಲುಪುತ್ತದೆ. ಕಾರ್ಮಿಕರು ಗೊಂದಲಕ್ಕೆ ಸಿಲುಕುವುದು ಬೇಡ. ಎಲ್ಲರಿಗೂ ಸರ್ಕಾರ ಆಹಾರ ಪದಾರ್ಥ ಕಿಟ್ ಕೊಡಬೇಕೆಂದು ಈಗಾಗಲೇ ನಿರ್ಣಯ ಮಾಡಿ ವಿತರಣೆ ಮಾಡುತ್ತಿದೆ ಎಂದರು..
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://www.youtube.com/channel/UCmBISI2sn_0gamb44UFj-vQ
ಖಾಕಿ ಒಳಗೊಬ್ಬ ಮಾನವೀಯ ತುಡಿತ ಇರುವ ಪಿಎಸ್ಐ ರಘುನಾಥ್
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g