May 4, 2024

MALNAD TV

HEART OF COFFEE CITY

ತಾಲೂಕು ಆಸ್ಪತ್ರೆಯಲ್ಲಿ ಶವಪರೀಕ್ಷೆಗೂ ವೈದ್ಯರಿಲ್ಲ, ಸರ್ಕಾರದ ವಿರುದ್ಧ ಸ್ಥಳಿಯರ ಆಕ್ರೋಶ

1 min read

ಭದ್ರಾ ನದಿಯಲ್ಲಿ ತೇಲುತ್ತಿದ್ದ ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ತಂದು ಶವ ಪರೀಕ್ಷೆಗೆ ವೈದ್ಯರೇ ಇಲ್ಲದೆ ಬರೋಬ್ಬರಿ ಒಂಬತ್ತು ಗಂಟೆಗಳ ಕಾಲ ಮರಣೋತ್ತರ ಪರೀಕ್ಷೆಗೆ ಪೊಲೀಸರೇ ಪರದಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಕಳಸದ ಭದ್ರಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ತೇಲುತ್ತಿದ್ದನ್ನ ಗಮನಿಸಿದ ಸ್ಥಳಿಯರು ವಿಷಯವನ್ನ ಪೊಲೀಸರ ಗಮನಕ್ಕೆ ತಂದಿದ್ದರು. ಸ್ಥಳಕ್ಕೆ ಹೋದ ಪೆÇಲೀಸರು ಮೃತದೇಹವನ್ನ ಕಳಸ ತಾಲೂಕು ಆಸ್ಪತ್ರೆಗೆ ರವಾನಿಸಿದ್ದರು. ಆದರೆ, ಕಳಸ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರೇ ಇಲ್ಲ. ವೈದ್ಯರೇ ಇಲ್ಲದೆ ಮರಣೋತ್ತರ ಪರೀಕ್ಷೆಗೆ ಒಂಬತ್ತು ಗಂಟೆಗಳ ಕಾಲ ಶವ ಆಸ್ಪತ್ರೆಯಲ್ಲೇ ಕೊಳೆಯುವಂತ ಸ್ಥಿತಿ ನಿರ್ಮಾಣವಾಗಿತ್ತು. ಸರ್ಕಾರ ತಾಲೂಕು ಕೇಂದ್ರ ಎಂದು ಘೋಷಿಸಿದೆ. ಆದರೆ, ಸಣ್ಣ-ಪುಟ್ಟ ಚಿಕಿತ್ಸೆಗೂ ದೂರದ ಊರುಗಳಿಗೆ ಹೋಗಬೇಕಾದ ಪರಿಸ್ಥಿತಿ ಇಂದಿಗೂ ಜೀವಂತವಾಗಿದೆ. ಸರ್ಕಾರ ಕೂಡಲೇ ಕಳಸ ತಾಲೂಕು ಆಸ್ಪತ್ರೆಗೆ ಖಾಯಂ ವೈದ್ಯರನ್ನ ನೇಮಕ ಮಾಡುಬೇಕೆಂದು ಒತ್ತಾಯಿಸಿದ್ದಾರೆ. ಹೆಸರಿಗೆ ತಾಲೂಕು ಆಸ್ಪತ್ರೆ. ಆದ್ರೆ, ಒಂದು ಇದ್ರೆ ಒಂಬತ್ತು ಇಲ್ಲ. ಆಂಬುಲೆನ್ಸ್ ಕೂಡ ಸರಿ ಇಲ್ಲ. ಖಾಯಂ ವೈದ್ಯರು ಇಲ್ಲ. ಸಿಬ್ಬಂದಿಗಳ ಕೊರತೆಯೂ ಇದೆ. ಈ ಸುಖಕ್ಕೆ ಸರ್ಕಾರ ಏಕೆ ತಾಲೂಕು ಕೇಂದ್ರ ಎಂದು ಘೋಷಿಸಬೇಕಿತ್ತು ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸರ್ಕಾರ ಕೂಡಲೇ ಖಾಯಂ ವೈದ್ಯರನ್ನ ನೇಮಿಸಬೇಕು. ಇಲ್ಲವಾದರೆ ಇದೇ ತಿಂಗಳ 25ರಂದು ಸರ್ಕಾರ ಹಾಗು ಜಿಲ್ಲಾಡಳಿತ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!