May 2, 2024

MALNAD TV

HEART OF COFFEE CITY

ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಯಾವುದೇ ರಾಜಕೀಯ ಇರಬಾರದು

1 min read

ಚಿಕ್ಕಮಗಳೂರು : ಕಬ್ಬಿಣದ ಅಂಗಡಿಯಲ್ಲಿ ನೊಣಕ್ಕೇನು ಕೆಲಸ ಎಂದು ಪಠ್ಯಪುಸ್ತಕ ಪರಿಷ್ಕರಣೆ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಹಾಗೂ ಜೆ.ಡಿ.ಎಸ್  ಪಕ್ಷದ ಮುಖಂಡ ಎಸ್.ಎಲ್. ಭೋಜೆಗೌಡ ಮಾರ್ಮಿಕವಾಗಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಯಾವುದೇ ರಾಜಕೀಯ ಇರಬಾರದು. ಪಠ್ಯಪುಸ್ತಕ ಪರಿಷ್ಕರಣೆಗೆ ಯೋಗ್ಯರಾದವರನ್ನು ಕರೆಸಿ ಪಠ್ಯಪುಸ್ತಕ ಪರಿಷ್ಕರಣೆ ನಡೆಸಬೇಕು. ರಾಜಕಾರಣಿಗಳಿಗೆ ಅಲ್ಲಿ ಕೆಲಸ ಇಲ್ಲ. ನಮ್ಮ ಮಕ್ಕಳಿಗೆ ಯಾವ ರೀತಿಯ ಪಠ್ಯವನ್ನು ಅಳವಡಿಸಿದರೆ ನಮ್ಮ ಮುಂದಿನ ಪೀಳಿಗೆಗೆ ಸೂಕ್ತ. ಹಿಂದಿನ ಕಾಲದಲ್ಲಿ ಉತ್ತಮ ಪಠ್ಯಪುಸ್ತಕಗಳನ್ನು ನೀಡಿ ನಮ್ಮನೆಲ್ಲ ಸಮಾಜದಲ್ಲಿ ಯೋಗ್ಯರಾಗುವಂತೆ ಮಾಡಿಲ್ಲವೇ ಎಂದು ಪ್ರಶ್ನೆ ಮಾಡಿದರು. ದೊಡ್ಡವರ ಬಗ್ಗೆ ನಾಲಿಗೆ ಉದ್ದ ಮಾಡಿರುವುದರಿಂದ ಸಾರ್ವಜನಿಕ ಬದುಕಿನಲ್ಲಿ ತೀರ್ಪು ನೀಡಿದ್ದಾರೆ.  ಈಗಲಾದರೂ ಕಡಿವಾಣ ಹಾಕುವುದು ಒಳ್ಳೆಯದು. ನಾನು ಇಲ್ಲಿಯ ದೌರ್ಜನ್ಯ, ದಬ್ಬಾಳಿಕೆ, ಭ್ರಷ್ಟಾಚಾರ ನೊಡಿ ಜೆಡಿಎಸ್ ಪಕ್ಷದ ತಾಲೂಕು ಘಟಕದ ತೀರ್ಮಾನದಂತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡುವಂತೆ ಹೇಳಿರುವುದು ನಿಜ. ನಾನು ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿಯೇ ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!