May 2, 2024

MALNAD TV

HEART OF COFFEE CITY

ಪ್ರಾಥಮಿಕ ಕೃಷಿ ಪತ್ತಿನ‌ ಸಹಕಾರ ಸಂಘಕ್ಕೆ‌ ಕನ್ನ, ಮೂರು ಲಕ್ಷ ದೋಚಿ ಪರಾರಿ

1 min read

 

 

ಕೊಪ್ಪ ತಾಲೂಕಿನ ಹಿರೇಗದ್ದೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಿಟಕಿ ಸರಳುಗಳನ್ನು ಗ್ಯಾಸ್ ಕಟ್ಟರ್ ನಿಂದ ಕಟ್ ಮಾಡಿ ಖದೀಮರು ಮೂರು ಲಕ್ಷದ 25 ಸಾವಿರ ಕಳ್ಳತನ ಮಾಡಿದ ಘಟನೆ ನಡೆದಿದೆ

 

ಸೋಮವಾರ ಸಂಘದ ಸಿಬ್ಬಂದಿಗಳು ಸ್ವಾತಂತ್ರ್ಯ ದಿನಾಚರಣೆ ಮಾಡಿ ಮನೆಗೆ ತೆರಳಿದ್ದರು. ಮಂಗಳವಾರ ಬೆಳಿಗ್ಗೆ ಬ್ಯಾಂಕ್ ಬಾಗಿಲು ತಗೆದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಹಣದ ಜತೆಗೆ ಬ್ಯಾಂಕ್‍ನ ಎಕ್ಸ್ಟ್ರನಲ್ ಹಾರ್ಡ್ ಡಿಸ್ಕ್ ಅನ್ನು ಸಹ ಕದ್ದೊಯ್ಯಲಾಗಿದ್ದು ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್ ಸಂತೋಷ್ ದೂರು ಸಲ್ಲಿಸಿದ್ದು, ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಇದೇ ಗ್ರಾಮದ ಮನೆಯೊಂದರಲ್ಲಿಯೂ ಸಹ ಯಾರು ಇಲ್ಲದ ವೇಳೆ ಕಳ್ಳತನವಾಗಿದ್ದು ಮಂಗಳವಾರ ರಾತ್ರಿ ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!