April 29, 2024

MALNAD TV

HEART OF COFFEE CITY

ಬೆಳ್ಳಂಬೆಳಿಗ್ಗೆ ವಾಕ್ ಮಾಡುವವರೇ ಎಚ್ಚರ… ಈ ದೃಶ್ಯ ನೋಡಿದರೆ ಎದೆ ಝಲ್ ಎನಿಸುತ್ತೆ..!

1 min read

ಚಿಕ್ಕಮಗಳೂರು: ಬೆಳ್ಳಂಬೆಳಿಗ್ಗೆ ವಾಕ್ ಮುಗಿಸಿ ತೆರಳುತ್ತಿದ್ದ ವ್ಯಕ್ತಿಗೆ ಸ್ಕೂಟಿಯೊಂದು ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಹಾಗೂ ವಾಕ್ ಮುಗಿಸಿ ತೆರಳುತ್ತಿದ್ದ ಇಬ್ಬರಿಗೂ ತೀವ್ರ ಗಾಯಗಳಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ದೃಶ್ಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಎದೆ ಝಲ್ ಎನಿಸುವಂತಿದೆ.

ವಾಕ್ ಮುಗಿಸಿ ರಸ್ತೆ ದಾಟುವಾಗ ಸ್ಕೂಟಿಯೊಂದು ಡಿಕ್ಕಿ ಹೊಡೆದ ರಭಸಕ್ಕೆ ಹಾರಿ ಬಿದ್ದ ಬೈಕ್ ಸವಾರ, ವಾಕರ್ ಇಬ್ಬರು ತೀವ್ರ ಗಾಯಗೊಂಡಿದ್ದಾರೆ. ಮೂಡಿಗೆರೆ ಹೊರವಲಯದ ಬಿಳಗುಳ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೆಳಗಿನ ಜಾವ ವಾಕ್ ಮುಗಿಸಿ ರಸ್ತೆ ದಾಟುತ್ತಿದ್ದ ಸಮೀರ್ ಎಂಬಾತನೆ ಅಪಘಾತಕ್ಕೊಳಗಾದ ವ್ಯಕ್ತಿಯಾಗಿದ್ದು ಸಮೀರ್ ಮೂಡಿಗೆರೆಯಲ್ಲಿ ಮೆಡಿಕಲ್ ನಡೆಸುತ್ತಿದ್ದಾರೆ. ಅಪಘಾತದಲ್ಲಿ ಸಮೀರ್ ಕಾಲು ಮುರಿತವಾಗಿದ್ದು ಮುಖ-ಕೈ- ಕಾಲಿಗೆ ತೀವ್ರ ಪೆಟ್ಟಾಗಿದ್ದು ಮಂಗಳೂರು ಆಸ್ಪತ್ರೆಗೆ ಆತನನ್ನು ರವಾನೆ ಮಾಡಲಾಗಿದೆ. ಸ್ಕೂಟಿ ಚಾಲಕನಿಗೂ ಗಂಭೀರ ಗಾಯ, ಮೂಡಿಗೆರೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!