ಕಾಡಾನೆ ದಾಳಿ ಮೂವರು ಪ್ರಾಣಾಪಾಯದಿಂದ ಪಾರು : ಅರಣ್ಯ ಇಲಾಖೆಯ ವಿರುದ್ದ ಆಕ್ರೋಶ
1 min readಮೂಡಿಗೆರೆ : ಒಂದೆಡೆ ಮಲೆನಾಡ ಭಾಗಗಳಲ್ಲಿ ಈ ಬಾರಿ ಸುರಿಯುತ್ತಿರವು ಮಳೆಯಿಂದ ಮಲೆನಾಡಿಗರು ಸಂಕಷ್ಟ ಅನುಭವಿಸುತ್ತಿದ್ದರೆ. ಮತ್ತೊಂದೆಡೆ ಕಾಡು ಪ್ರಾಣಿಗಳ ದಾಳಿಯಿಂದಾಗಿ ಮಲೆನಾಡಿಗರು ತ್ರಿಶಂಕು ಸ್ಥಿತಿಯಲ್ಲಿ ಬದುಕನ್ನು ದೂಡುವಂತಾಗಿದೆ.
ಪ್ರವಾಹದ ರೀತಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಕಳೆದುಕೊಂಡರೆ, ಬೆಳೆದ ಬೆಳೆ ಕೈ ಸೇರುವ ಮುನ್ನವೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಇನ್ನೂ ಆನೆಗಳ ಹಿಂಡು ಗ್ರಾಮಗಳಿಗೆ ಲಗ್ಗೆ ಇಟ್ಟು, ಬೆಳೆ ನಾಶ ಮಾಡುತ್ತಿರವುದಲ್ಲದೆ, ಆನೆಗಲ ಕಾಟದಿಂದ ಜನ ಸಾಮಾನ್ಯರ ಬದುಕು ಅಪಾಯದ ಅಂಚಿನಲ್ಲಿದೆ.
ಮೂಡಿಗೆರೆ ತಾಲೂಕಿನ ದೇವರಮನೆ ಬಳಿ ಶಿವಾಜಿ ಎಂಬುವವರು ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ಹೋಗುತ್ತಿದ್ದಾಗ ಏಕಾಏಕಿ ಕಾರಿನ ಮೇಲೆ ಕಾಡನೆಗಳ ಹಿಂಡು ದಾಳಿ ಮಾಡಿದೆ. ಇದರಿಂದ ಭಯ ಭೀತಗೊಂಡು ಅವುಗಳಿಂದ ತಪ್ಪಿಸಿಕೊಳ್ಳಲು ಕಾರನ್ನು ರಸ್ತೆಯ ಪಕ್ಕಕ್ಕೆ ಚಲಾಯಿಸಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ ನುಗ್ಗಿದೆ. ಇದರಿಂದ ಕಾರಿನಲ್ಲಿದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯು ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಾಡಾನೆಗಳ ಹಿಂಡು ಗ್ರಾಮಗಳಿಗೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ ನಾಶ ಮಾಡುತ್ತಿದ್ದು, ಈ ಬಗ್ಗೆ ಸುತ್ತಮುತ್ತಲ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದರು, ಕ್ಯಾರೆ ಎನ್ನದ ಅರಣ್ಯ ಇಲಾಖೆಯ ನಿರ್ಲಕ್ಷದಿಂದ ಮೂಡಿಗೆರೆ ತಾಲೂಕಿನ ದೇವರಮನೆ., ಬೈರಪುರ, ಗುತ್ತಿ, ಹಾಂದಿ, ವಿಜಯನಗರ, ಹೊಸಪೇಟೆ ಸೇರಿದಂತೆ ಮೂಡಿಗೆರೆ ಸುತ್ತಮುತ್ತಲ ಗ್ರಾಮಸ್ಥರು ಭಯದಲ್ಲಿ ಬದುಕು ದೂಡುವಂತಾಗಿದೆ. ಲಗ್ಗೆ ಇಟ್ಟಿರುವ ಕಾಡಾನೆಗಳನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಅರಣ್ಯ ಇಲಾಖೆಯ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g