April 29, 2024

MALNAD TV

HEART OF COFFEE CITY

ರಾಜ್ಯದ ಪ್ರತಿ ಶಾಸಕರ ಕ್ಷೇತ್ರಕ್ಕೆ ಮೂರು ಕೆಪಿಎಸ್ ಶಾಲೆ – ಮಧು ಬಂಗಾರಪ್ಪ

1 min read

 

ಚಿಕ್ಕಮಗಳೂರು : ರಾಜ್ಯದ ಪ್ರತಿ ಶಾಸಕರ ಕ್ಷೇತ್ರಕ್ಕೆ ತಲಾ ಮೂರು ಕೆಪಿಎಸ್ ಶಾಲೆಗಳನ್ನು ಮಂಜೂರು ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆಯಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಗುಂಪು ಆಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರಿಯಾಗಿ ಓದಿ ಉತ್ತೀರ್ಣರಾಗಲು ವಿದ್ಯಾರ್ಥಿಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ತಾವು ಈ ಬಾರಿ ಒಂದೇ ಕೆಪಿಎಸ್ ಶಾಲೆಗಳನ್ನು ತೆರೆಯುವುದರಿಂದ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಹೆಚ್ಚುತ್ತದೆ ಜೊತೆಗೆ ಶಿಕ್ಷಕರ ಕೊರತೆ ನೀಗುತ್ತದೆ ಎಂದು ತಿಳಿಸಿದರು. ಒಂದೇ ವರ್ಷದಲ್ಲಿ ಮೂರು ಬಾರಿ ಬೋರ್ಡ್ ಎಕ್ಸಾಮ್ ನಡೆಸಿದ್ದರಿಂದಾಗಿ ಫೇಲಾದ ವಿದ್ಯಾರ್ಥಿಗಳಿಗೆ ಒಂದು ವರ್ಷ ವೇಸ್ಟ್ ಆಗುವುದು ತಪ್ಪಿತು ರಾಜ್ಯದ 42 ಸಾವಿರ ವಿದ್ಯಾರ್ಥಿಗಳಿಗೆ ಆ ವರ್ಷದಲ್ಲೇ ಮತ್ತೆ ಪರೀಕ್ಷೆ ಎದುರಿಸಿ ಪಾಸ್ ಆಗಲು ಸಾಧ್ಯವಾಯಿತು ಎಂದರು. ಒಂದೇ ವರ್ಷದಲ್ಲಿ ಮೂರು ಬಾರಿ ಬೋರ್ಡ್ ಎಕ್ಸಾಮ್ ನಡೆಸಿರುವುದು ದೇಶದ ಇತಿಹಾಸದಲ್ಲಿ ಇದೇ ಪ್ರಥಮವಾಗಿದೆ ಎಂದ ಅವರು ಈ ಎಕ್ಸಾಮ್ ಗಳಲ್ಲಿ ರಾಜ್ಯದ ಒಂದು ಲಕ್ಷದ ಇಪ್ಪತ್ತು ಸಾವಿರ ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆದಿದ್ದು ಅದರಲ್ಲಿ 42 ಸಾವಿರ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಆ ಎಲ್ಲಾ ವಿದ್ಯಾರ್ಥಿಗಳು ಇದೇ ವರ್ಷ ಕಾಲೇಜಿಗೆ ದಾಖಲಾಗುತ್ತಾರೆ ಎಂದು ತಿಳಿಸಿದರು. ಮುಂದಿನ ವರ್ಷ ಎಸ್ ಎಸ್ ಎಲ್ ಸಿ ಗೂ ವರ್ಷದಲ್ಲಿ ಮೂರು ಬಾರಿ ಬೋರ್ಡ್ ಎಕ್ಸಾಮ್ ನಡೆಸಲಾಗುವುದು ಎಂದು ಹೇಳಿದರು. ಈ ಹಿಂದೆ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ಮೊಟ್ಟೆ ನೀಡಲಾಗುತ್ತಿತ್ತು ತಾವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಕ್ಕಳ ಪರಿಸ್ಥಿತಿಯನ್ನು ಮನವರಿಕೆ ಮಾಡಿ ಈಗ ಎರಡು ಮೊಟ್ಟೆ ನೀಡುವ ಕೆಲಸ ಆರಂಭಿಸಿದ್ದೇವೆ ಎಂದರು. ಶಿಕ್ಷಣ ಇಲಾಖೆ ಎದುರುಸುತ್ತಿರುವ ಸಮಸ್ಯೆಗಳು ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಲ್ಲವನ್ನೂ ಬಗೆಹರಿಸಲು ಸಾಧ್ಯವಾಗದಿದ್ದರೂ ಕೆಲವನ್ನಾದರೂ ಖಂಡಿತ ಪರಿಹರಿಸಲಾಗುವುದು ಎಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!