May 17, 2024

MALNAD TV

HEART OF COFFEE CITY

ಸಿಡಿಲು-ಗುಡುಗು ಸಹಿತ ಮಳೆ ಆರ್ಭಟ : ವಿದ್ಯುತ್ ಉಪಕರಣ, ಮನೆ ಹಾನಿ

1 min read

ಚಿಕ್ಕಮಗಳೂರು : ಸಿಡಿಲು-ಗುಡುಗು ಸಹಿತ ಸುರಿದ ಮಳೆಯ ಆರ್ಭಟಕ್ಕೆ ಮನೆಯ ಗೋಡೆಗೆ ಸಿಲಿಡು ಬಡಿದು ವಿದ್ಯುತ್ ಉಪಕರಣ ಹಾಗೂ ಮನೆಗೆ ಹಾನಿಯಾಗಿರೋ ಘಟನೆ  ಜಿಲ್ಲೆ ಮೂಡಿಗೆರೆ ತಾಲೂಕಿನ ಮೂಲರಹಳ್ಳಿ ಗ್ರಾಮದ ರವೀಶ್ ಎಂಬುವವರ ಮನೆಯಲ್ಲಿ ನಡೆದಿದೆ.

ಕಳೆದ ಒಂದು ವಾರಗಳ ಹಿಂದೆ ಮಲೆನಾಡಿನಲ್ಲಿ ಜೋರಾಗಿ ಬಿಟ್ಟು ಬಿಡದೆ ಆರ್ಭಟಿಸಿದ್ದ ಮಳೆ, ಕಳೆದ ಒಂದು ವಾರಗಳಿಂದ ಜಿಲ್ಲೆಯಲ್ಲಿ ಕೊಂಚ ಬಿಡುವುಕೊಟ್ಟಿತ್ತು. ಆದರೆ ಎರಡು ದಿನಗಳಿಂದ ಮೂಡಿಗೆರೆ, ಶೃಂಗೇರಿ, ಕಳಸ ಭಾಗದಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ.

ಮೂಡಿಗೆರೆ ಭಾಗದಲ್ಲಿ ನಿನ್ನೆಯಿಂದ ಗುಡುಗು ಸಹಿತ ಮಳೆಯಾಗುತ್ತಿದ್ದು ಮೂಡಿಗೆರೆ ತಾಲೂಕಿನ ಮೂಲರಹಳ್ಳಿ ನಿವಾಸಿ ರವೀಶ್ ಎಂಬುವರ ಮನೆಗೆ ಸಿಡಿಲು ಬಡಿದು ಮನೆ ಹಾಗೂ ಮನೆಯಲ್ಲಿದ್ದ ವಿದ್ಯುತ್ ಉಪಕರಣ ಹಾನಿಯಾಗಿವೆ. ಅದೃಷ್ಠವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!