ಅಮೃತ ಮಹೋತ್ಸವದ ಅಂಗವಾಗಿ ತಿರಂಗ ರ್ಯಾಲಿ
1 min readಚಿಕ್ಕಮಗಳೂರು : ಭಾರತ ಸ್ವಾತಾಂತ್ರ್ಯದ 75 ರ ಅಮೃತ ಮಹೋತ್ಸವದ ಸಂಭ್ರಮದ ಅಂಗವಾಗಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಾತೆಯರು ಭಾರತ ಮಾತೆಯ ಭಾವಚಿತ್ರದೊಂದಿಗೆ ಭಾರತದ ರಾಷ್ಟ್ರ ಧ್ವಜವನ್ನು ಹಿಡಿದು ತಹಶಿಲ್ದಾರ್ ಕಛೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೆ ತಿರಂಗ ಯಾತ್ರೆ ನಡೆಸಿದರು.
ತಿರಂಗ ಯಾತ್ರೆಯಲ್ಲಿ ಬ್ರಹ್ಮ ಕುಮಾರಿಸ್ ಈಶ್ವರಿಯ ವಿಶ್ವವಿದ್ಯಾಲಯ, ಬಿಜೆಪಿ ಮಹಿಳಾ ಮೋರ್ಚಾ, ಜೈನ್ ಮಹಿಳಾ ಸಂಘ, ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮಹಿಳಾ ಸದಸ್ಯರು ಕೇಸರಿ, ಬಿಳಿ, ಹಸಿರು ಬಣ್ಣದ ಸೀರೆ ತೊಟ್ಟು, ಭಾರತದ ರಾಷ್ಟ್ರಧ್ವಜವನ್ನು ಕೈಯಲ್ಲಿ ಹಿಡಿದು, ಭಾರತ ಮಾತೆಗೆ ಜೈಕಾರ ಕೂಗುತ್ತ ನಗರದ ರಾಜಬೀದಿಯಲ್ಲಿ ಮೆರವಣಿಗೆ ನಡೆಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g