ಅನೈತಿಕ ಸಂಬಂಧದಿಂದ ಬೇಸತ್ತ ಗೃಹಿಣಿ ಆತ್ಮಹತ್ಯೆ: ಪತಿ ಮೇಲೆ ಕೊಲೆ ಕೇಸ್ ದಾಖಲು
1 min readಚಿಕ್ಕಮಗಳೂರು: ಪತಿಯ ಅಕ್ರಮ ಸಂಬಂಧದಿಂದ ಬೇಸತ್ತ ಪತ್ನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಹಕ್ಕಿವೃದ್ಧಿ ಗ್ರಾಮದಲ್ಲಿ ನಡೆದಿದೆ. ಇತ್ತ ಪತಿಯ ಮನೆಯವರು ಕೊಲೆ ಮಾಡಿದ್ದಾರೆಂದು ಮೃತಳ ಕುಟುಂಬಸ್ಥರು ದೂರು ನೀಡಿರುವ ಹಿನ್ನೆಲೆಯಲ್ಲಿ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನುಮಾನಾಸ್ಪದವಾಗಿ ಮನೆಯಲ್ಲಿದ್ದ ಶ್ವೇತಾ ಎಂಬ ಗೃಹಿಣಿ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದು, ಪೋಷಕರಿಂದ ಪತಿಯ ವಿರುದ್ಧ ಕೊಲೆ ಆರೋಪ ಮಾಡಲಾಗಿದೆ. ಸಾವನ್ನಪಿದ ಮಹಿಳೆಯನ್ನು ತರಾತುರಿಯಲ್ಲಿ ಅಂತ್ಯಕ್ರಿಯೆಗೆ ಸಿದ್ದತೆ ನಡೆಸಿದ್ದ ಪತಿ ಮನೆಯವರನ್ನ ತಡೆದು ಶವ ಪರೀಕ್ಷೆಗೆಂದು ಆಸ್ಪತ್ರೆಗೆ ಮೃತಳ ದೇಹವನ್ನು ಪೋಷಕರು ಸಾಗಿಸಿದರು. ಮೂಡಿಗೆರೆ ತಾಲೂಕಿನ ದೇವವೃಂದ ಸಮೀಪದ ಹಕ್ಕಿವೃದ್ದಿ ಗ್ರಾಮದಲ್ಲಿ ಘಟನೆ ನಡೆದಿದ್ದು,ಮನೆಯಲ್ಲಿ ಅನುಮಾನಾಸ್ಪದವಾಗಿ ಗೃಹಿಣಿ ಶ್ವೇತಾ (31) ಮೃತಪಟ್ಟಿದ್ದಾಳೆ. ಈ ನಡುವೆ ಪಾಯಿಸನ್ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿದ್ದಾರೆಂದು ಪತಿ ದರ್ಶನ ವಿರುದ್ಧ ಆರೋಪ ಮಾಡಲಾಗಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ದರ್ಶನ್ ಮನೆಯ ತುಂಬಾ ಸಿರೆಂಜ್ ಗಳನ್ನು ಇಟ್ಟುಕೊಂಡಿದ್ದ ಎನ್ನಲಾಗುತ್ತಿದೆ. ಇತ್ತ ಶ್ವೇತಾ ಸಾಯುತ್ತಿದ್ದಂತೆ ಅವಳಿಗೆ ಹಾರ್ಟ್ ಅಟ್ಯಾಕ್ ಆಗಿದೆ ಎಂದು ಪತ್ನಿಯ ಪೋಷಕರಿಗೆ ದರ್ಶನ್ ಮಾಹಿತಿ ನೀಡಿದ್ದ ಅನುಮಾನಕ್ಕೆ ಕಾರಣವಾಗಿದೆ. 4 ದಿನದ ಹಿಂದೆ ಬೆಂಗಳೂರಿನಿಂದ ದೇವವೃಂದಕ್ಕೆ ದರ್ಶನ್ ಮತ್ತು ಶ್ವೇತಾ ದಂಪತಿ ಆಗಮಿಸಿದ್ದರು. 7 ವರ್ಷಗಳ ಹಿಂದೆ ದರ್ಶನ್ ಜೊತೆ ವಿವಾಹವಾಗಿದ್ದ ಶ್ವೇತಾ ಬದುಕಿರುವಾಗ ದರ್ಶನ್ ಗೆ ಅಶ್ವಿನಿ ಎಂಬ ಮಹಿಳೆ ಜೊತೆ ಅನೈತಿಕ ಸಂಬಂಧದ ಆರೋಪ ಮಾಡಿದ್ದರು. ಈ ನಡುವೆ ಮೂಡಿಗೆರೆಯ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ದರ್ಶನ್ , ಆತನ ತಂದೆ ತಾಯಿ ತಮ್ಮನ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g