ನಿಧಿ ಶೋಧ, 25 ಅಡಿ ಆಳದ ಗುಂಡಿ ತೋಡಿದ ದುಷ್ಕೃರ್ಮಿಗಳು
1 min read
ನಿಧಿಗಾಗಿ ದುಷ್ಕರ್ಮಿಗಳು ಕಾಫಿ ತೋಟದ ಮಧ್ಯೆ 15 ಅಡಿ ಅಗಲ ಹಾಗೂ ಸುಮಾರು 25 ಅಡಿಯಷ್ಟು ಆಳದ ಬೃಹತ್ ಗುಂಡಿ ತೋಡಿ ನಿಧಿಗಾಗಿ ಶೋಧ ನಡೆಸಿರುವ ಘಟನೆ ತಾಲೂಕಿನ ಆಣೂರು ಸಮೀಪದ ಕೆಸರಿಕೆ ಗ್ರಾಮದಲ್ಲಿ ನಡೆದಿದೆ. ಉಡುಪಿ ನೋಂದಣಿ ಹೊಂದಿರುವ ಎರಡು ಕಾರುಗಳಲ್ಲಿ ಬಂದಿದ್ದ 15ಕ್ಕೂ ಹೆಚ್ಚು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ನಿಧಿಗಾಗಿ ಶೋಧ ನಡೆಸಿದ ಜಾಗದಲ್ಲಿ ಅರಿಶಿನ-ಕುಂಕುಮ, ಬಾಳೆಹಣ್ಣು, ತೆಂಗಿನಕಾಯಿ, ಕುಂಬಳಕಾಯಿ, ಊದುಬತ್ತಿ, ಕರ್ಪೂರ, ಮೂರು ತರದ ದಾರ, ಕೋಳಿ ಸೇರಿದಂತೆ ವಿವಿಧ ವಸ್ತುಗಳು ಪತ್ತೆಯಾಗಿವೆ. ಕಳೆದೊಂದು ವಾರದಿಂದ ರಸ್ತೆ ಬದಿ ಎರಡು ಮೂರು ಗಾಡಿಗಳು ನಿಲ್ಲುತ್ತಿದ್ದವು. ಸ್ಥಳೀಯರಿಗೆ ಅನುಮಾನ ಕೂಡ ಮೂಡಿತ್ತು. ಕಳೆದ ರಾತ್ರಿ ತೋಟಕ್ಕೆ ನೀರಾಯಿಸಲು ಹೋಗುವಾಗಲೂ ರಸ್ತೆ ಬದಿ ಎರಡು ಕಾರುಗಳು ನಿಂತಿದ್ದವು. ತೋಟಕ್ಕೆ ನೀರಿನ ಮೋಟಾರ್ ಆನ್ ಮಾಡಿ ಬರುವಾಗ ತೋಟದ ಮಧ್ಯೆ ಗಲಾಟೆ ಹಾಗೂ ಬೆಳಕು ಕಾಣುತ್ತಿತ್ತು. ಇದನ್ನ ಗಮನಿಸಿದ ಸ್ಥಳೀಯರು ಊರಿಗೆ ಬಂದು ನಾಲ್ಕೈದು ಜನ ಸ್ಥಳಕ್ಕೆ ಹೋಗಿ ಟಾರ್ಚ್ ಆನ್ ಮಾಡಿ ಯಾರೆಂದು ಕೇಳಿದಾಗ ಎಲ್ಲರೂ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸ್ಥಳದಲ್ಲಿದ್ದ ಗುಂಡಿಯನ್ನು ಕಂಡು ಸ್ಥಳೀಯರು ಆತಂಕಗೊಂಡಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g