May 17, 2024

MALNAD TV

HEART OF COFFEE CITY

ಅಪಘಾತಕ್ಕೀಡಾಗಿ ರಸ್ತೆಬದಿ ಸಾವು-ಬದುಕಿನ ಮಧ್ಯೆ ಹೋರಾಡ್ತಿದ್ದ ಮರಿಕೋತಿಗೆ ಚಿಕಿತ್ಸೆ….

1 min read

 

ಚಿಕ್ಕಮಗಳೂರು. ಅಪಘಾತಕ್ಕೀಡಾಗಿ ರಸ್ತೆ ಬದಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮರಿಕೋತಿಗೆ ಸ್ಥಳಿಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮತ್ತೆ ಅರಣ್ಯಕ್ಕೆ ಬಿಟ್ಟಿರುವ ಘಟನೆ ತಾಲೂಕಿನ ಆಲ್ದೂರು ಬಳಿ ನಡೆದಿದೆ. ಆಲ್ದೂರು ಸಮೀಪದ ಗುಮ್ಮನ್ ಖಾನ್ ಬಳಿ ರಾಜ್ಯ ಹೆದ್ದಾರಿಯಲ್ಲಿ ಮರಿ ಕೋತಿಯೊಂದು ಅಪಘಾತಕ್ಕೀಡಾಗಿ ರಸ್ತೆ ಬದಿ ನರಳಾಡುತ್ತಿತ್ತು. ತಾಯಿ ಮರಿಗಾಗಿ ಕೂಗಾಡುತ್ತಿತ್ತು. ದೇಹದಲ್ಲಿ ರಕ್ತ ಸೋರುತ್ತಿತ್ತು. ಇದನ್ನ ಕಂಡ ಸ್ಥಳಿಯ ಸುಂದರೇಶ್, ಜನಾರ್ಧನ್ ಹಾಗೂ ಅಪ್ಪಣ್ಣ ಎಂಬುವರು ದೇಹದಲ್ಲಿ ರಕ್ತ ಸುರಿಯುತ್ತಿದ್ದ ಕೋತಿಯ ಚೀರಾಟವನ್ನ ಕಂಡು ಮನನೊಂದು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಕೂದುವಳ್ಳಿಯ ಪಶುಚಿಕಿತ್ಸಾಲಯಕ್ಕೆ ಕೊಂಡೊಯ್ದು ಕೋತಿ ಮರಿಗೆ ಚಿಕಿತ್ಸೆ ಕೊಡಿಸಿದ್ದಾರೆ. ಚಿಕಿತ್ಸೆ ಬಳಿಕ ಕೋತಿಯನ್ನ ಅರಣ್ಯ ಇಲಾಖೆ ಅಧಿಕಾರಿಗಳ ಮೂಲಕ ಅರಣ್ಯಕ್ಕೆ ಬಿಟ್ಟಿದ್ದಾರೆ. ಸ್ಥಳಿಯರು ಈ ಕೆಲಸಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಅಭಿನಂದನೆ ಸಲ್ಲಿಸಿದ್ದಾರೆ. ಚಿಕಿತ್ಸೆಯ ಬಳಿಕ ಕೋತಿಯ ಲವಲವಿಕೆ ಕಂಡು ಅದನ್ನ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸದ ಸ್ಥಳಿಯರು ಮೊಗದಲ್ಲೂ ಮಂದಹಾಸ ಮೂಡಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!