May 11, 2024

MALNAD TV

HEART OF COFFEE CITY

ರಾಜ್ಯಾಧ್ಯಕ್ಷರ ಹುದ್ದೆಯ ಹಗ್ಗಜಗ್ಗಾಟ : ಪ್ರತಿಕ್ರಿಯೆ ನೀಡಲು ಸಿ.ಟಿ.ರವಿ ನಕಾರ 

1 min read

 

 

ಚಿಕ್ಕಮಗಳೂರು.: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಒಮ್ಮೆ ರಾಜೀನಾಮೆ ನೀಡಿದ್ದೇನೆ ಅಂತಾರೆ. ಆಮೇಲೆ ಇಲ್ಲ ಅಂತಾರೆ. ಆರ್.ಅಶೋಕ್ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಇಲ್ಲ. ಪಾರ್ಲಿಮೆಂಟ್ ಎಲೆಕ್ಷನ್ ವೇಳೆ ಬದಲಾವಣೆ ಇಲ್ಲ ಅನ್ಸತ್ತೆ. ನನ್ನ ಗಮನಕ್ಕೆ ಬಂದಿಲ್ಲ ಅಂತಾರೆ. ಆದರೆ, ಸಿ.ಟಿ.ರವಿ ಈ ಪ್ರಶ್ನೆಗೆ ನಾನು ಉತ್ತರ ನೀಡಲ್ಲ. ಸಾರಿ ಟು ಸೆ. ಐ ವಿಲ್ ನಾಟ್ ಆನ್ಸರ್ ದಿಸ್ ಕ್ವಷ್ಚನ್ ಎಂದಿದ್ದಾರೆ. ಸಿ.ಟಿ.ರವಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯ ಎಂಬ ಪ್ರಶ್ನೆಗೆ ನಾನು ಯಾವುದೇ ರೇಸ್ ನಲ್ಲಿ ಇಲ್ಲ. ನಾನು ಈಗಿನ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದೇನೆ. ಕಾರ್ಯಕರ್ತ ಅನ್ನೋದನ್ನ ಯಾವತ್ತೂ, ಯಾರು ಕಿತ್ತುಕೊಳ್ಳಲು ಆಗುವುದಿಲ್ಲ. ಪಕ್ಷ ನನಗೆ ಎಕ್ಸ್ ಪೀರಿಯನ್ಸ್ ಆಗಲು ಹಾಗೂ ಎಕ್ಸ್ ಪೆÇೀಸ್ ಆಗೋದಕ್ಕೆ ಎರಡಕ್ಕೂ ಅವಕಾಶ ಮಾಡಿಕೊಟ್ಟಿದೆ. ಈ ಸಂದರ್ಭದಲ್ಲಿ ನಾನು ಯಾವ ಹುದ್ದೆಯ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಸರ್ಕಾರದ ಒಂಬತ್ತು ವರ್ಷದ ಸಾಧನೆಯ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಿ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದ್ದು ನರೇಂದ್ರ ಮೋದಿ ಸರ್ಕಾರವನ್ನ ಮತ್ತೊಮ್ಮೆ ಅಧಿಕಾರಕ್ಕೆ ತರಲು ಎಲ್ಲರೂ ಪಣ ತೊಡಬೇಕು ಎಂದರು. ಮನೆ-ಮನೆಗೆ ಒಂಬತ್ತು ವರ್ಷದ ಸಾಧನೆಯನ್ನ ಮುಟ್ಟಿಸಿ ಮತ್ತೊಮ್ಮೆ ಕಮಲದ ಹೂವನ್ನ ಅರಳಿಸಬೇಕು ಎಂದರು. ದೇಶಭಕ್ತಿಯನ್ನೇ ಉಸಿರಾಗಿಟ್ಟುಕೊಂಡು ದೇಶಕ್ಕಾಗಿ ಕೆಲಸ ಮಾಡುವಂತಹಾ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನ ಮತ್ತೆ ಅಧಿಕಾರಕ್ಕೆ ತರುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕಾರ್ಯಕರ್ತರನ್ನ ಹುರಿದುಂಬಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!