April 29, 2024

MALNAD TV

HEART OF COFFEE CITY

ಎರಡು ಪ್ರತ್ಯೇಕ ಪ್ರಕರಣ; ಆರು ಜನರ ಬಂಧನ

1 min read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣದಲ್ಲಿ ಪೊಲೀಸರು ಒಟ್ಟು ಆರು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗೂಡ್ಸ್ ಆಟೋದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕು ವಸ್ತಾರೆ ಗ್ರಾಮದಲ್ಲಿ ನಡೆದಿದೆ. ಗೂಡ್ಸ್ ಆಟೋದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮಹಮ್ಮದ್ ಸಾದತ್ ಅಲಿ ಮತ್ತು ಮುಬಾರಕ್ ಎಂಬು ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಪಿ.ಎಸ್.ಐ. ಸಿ.ಇ.ಎನ್  ಠಾಣೆಯ ಸಿಬ್ಬಂದಿಗಳು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದುಕೊಂಡು, 450 ಗ್ರಾಂ ಗಾಂಜಾ ಮತ್ತು ಗೂಡ್ಸ್ ಆಟೋ ವಶಪಡಿಸಿಕೊಂಡಿರುತ್ತಾರೆ.
ಈ ಸಂಬಂಧ ಜಿಲ್ಲಾ ಸಿ.ಇ.ಎನ್. ಅಪರಾಧ ಪೊಲೀಸ್ ಠಾಣೆಯಲ್ಲಿ ಮೇಲ್ಕಂಡ ಇಬ್ಬರು ಸೇರಿದಂತೆ ಗಾಂಜಾ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣವನ್ನು ಗಳಿಸಬಹುದೆಂದು ಹೇಳಿ ಕೊಟ್ಟಿದ್ದ ಕೊಪ್ಪ ಮೂಲದ ಇನೋರ್ವ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಅದೇ ರೀತಿ ಇತ್ತೀಚಿಗೆ ಅಕ್ರಮವಾಗಿ ಅಂದರ್ ಬಾಹರ್ ಇಸ್ಪಿಟ್ ಜೂಜಾಟದಲ್ಲಿ ತೊಡಗಿದ್ದ 4 ಜನರನ್ನು ಅಪರಾಧ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಅಜ್ಜಂಪುರ ತಾಲ್ಲೂಕಿನ ಗುರುಗದಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂಜಾಟದಲ್ಲಿ ತೊಡಗಿದ್ದ ಲೋಕೇಶ(40), ಅಜ್ಜಯ್ಯ (25), ರಂಗಪ್ಪ(32), ತಿಮ್ಮಪ್ಪ(38) ರವರುಗಳನ್ನು ಪಿ.ಎಸ್.ಐ. ಸಿ.ಇ.ಎನ್ ಠಾಣೆಯ ತಂಡ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಅಂದರ್ ಬಾಹರ್ ಇಸ್ಪೀಟು ಜೂಜಾಟಕ್ಕೆ ಪಣವಾಗಿ ಕಟ್ಟಿದ್ದ ಒಟ್ಟು ರೂ. 12,550 ನಗದನ್ನು ವಶಪಡಿಸಿಕೊಂಡಿರುತ್ತಾರೆ. ಈ ಸಂಬಂಧ ಜಿಲ್ಲಾ ಸಿ.ಇ.ಎನ್. ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!