ಸಂಸದೆ ಶೋಭಾಕರಂದ್ಲಾಜೆಗೆ ಸಚಿವ ಸ್ಥಾನ ಸಿಗಲೆಂದು ದೇವರ ಮೊರೆ ಹೋದ ಅಭಿಮಾನಿಗಳು !!!
1 min readಚಿಕ್ಕಮಗಳೂರು : ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾಕರಂದ್ಲಾಜೆ ಗೆ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಸಿಗಲಿ ಎಂದು ಶೋಭಾ ಅಭಿಮಾನಿಗಳು ಚಿಕ್ಕಮಗಳೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ್ರು.
ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸಂಪುಟದಲ್ಲಿ ಅವಕಾಶ ಸಿಗಬೇಕು, ಎರಡು ಭಾರಿ ಸಂಸದೆಯಾಗಿ ಸೇವೆ ಸಲ್ಲಿಸಿರೋ ಶೋಭಾ ಕರಂದ್ಲಾಜೆಗೆ ಕೇಂದ್ರ ಸಚಿವ ಸ್ಥಾನ ಸಿಗಲಿ ಎಂದು ಚಿಕ್ಕಮಗಳೂರು ನಗರದ ಗಣಪತಿ ದೇವಸ್ಥಾನದಲ್ಲಿ ಬೆಳಿಗ್ಗೆ 10 ಗಂಟೆಗೆ ಶೋಭಾ ಹೆಸರಿನಲ್ಲಿ ಪೂಜೆ ಮಾಡಿಸಿದ್ರು.
ಈ ವೇಳೆ ನಗರ ಬಿಜೆಪಿ ಉಪಾಧ್ಯಕ್ಷ ದಿನೇಶ್, ಪೂರ್ಣೆಶ್ ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಕೌಶಿಕ್, ಶಶಿ ಆಲ್ದೂರ್ ಹಾಗೂ ಯುವಮೋರ್ಚಾ ಉಪಾಧ್ಯಕ್ಷರಾದ ಸಚ್ಚಿನ್ ಉಪಸ್ಥಿತರಿದ್ದರು..
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g