April 29, 2024

MALNAD TV

HEART OF COFFEE CITY

ಒಂದೇ ಕುಣಿಕಿಗೆ ಶರಣಾದ ದುರ್ದೈವಿ ಪ್ರೇಮಿಗಳು

1 min read

ಚಿಕ್ಕಮಗಳೂರು : ಒಂದೇ ನೇಣಿನ ಕುಣಿಕೆಗೆ ಪ್ರೇಮಿಗಳಿಬ್ಬರು ಕೊರಳೊಡ್ಡಿ ದುರಂತ ಅಂತ್ಯ ಕಂಡಿರುವ ಘಟನೆ ಆಲ್ದೂರು ಸಮೀಪದ ಗುಲ್ಲನಪೇಟೆ ಬಳಿ ನಡೆದಿದೆ.

ಆಲ್ದೂರು ಸಮೀಪದ ಗುಲ್ಲನಪೇಟೆಯ ಸತ್ತಿಹಳ್ಳಿ ಬಳಿಯ ನಿರ್ಜನ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದೇಹಗಳು ಪತ್ತೆಯಾಗಿದ್ದು, ಒಂದೇ ವೇಲ್ ನಲ್ಲಿ ಯುವಕ- ಯುವತಿಯರಿಬ್ಬರೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಕಲ್ಲುಗುಡ್ಡೆ ಅಣೂರಿನ ದರ್ಶನ್ ಹಾಗೂ ಹಾಸನ ಜಿಲ್ಲೆಯ ಹಾನಬಾಳು ಮೂಲದ ಪೂರ್ವಿಕಾ ಮೃತದುರ್ದೈವಿಗಳಾಗಿದ್ದು, ಇಬ್ಬರು ಪ್ರೇಮಿಗಳು ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತ ದೇಹವನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!