April 29, 2024

MALNAD TV

HEART OF COFFEE CITY

ವಿಶೇಷ ರೀತಿಯಲ್ಲಿ ಸ್ವಾತಂತ್ರ್ಯ ಅಮೃತೋತ್ಸವ ಆಚರಣೆ

1 min read

ಚಿಕ್ಕಮಗಳೂರು : ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿದ್ದು, ಈ ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಇಲ್ಲೊಬ್ಬರು ದೇಶಾಭಿಮಾನಿ ಎಲೆ ಮರೆ ಕಾಯಿಯಂತೆ ಜನರಲ್ಲಿ ಜಾಗೃತಿ ಮೂಡಿಸುವ ವಿಶೇಷ ಕೆಲಸ ಮಾಡುತ್ತಿದ್ದಾರೆ.

ಹೌದು ಸಂಜೆಯಾಗುತ್ತಿದ್ದಂತೆ ಒಂದು ಮನೆಯಿಂದ ಮತ್ತೊಂದು ಮನೆಗೆ ಸ್ವಾತಂತ್ರ್ಯ ಜ್ಯೋತಿ ಹೆಸರಿನ ಜ್ಯೋತಿಯನ್ನು ಅತ್ಯಂತ ಶ್ರದ್ದಾ ಭಕ್ತಿಯಿಂದ ತೆಗೆದುಕೊಂಡು ಹೋಗಿ, ಭಜನೆ ನಡೆಸಿ ಮನೆಯವರಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಮಡಿದವರ ಬಗ್ಗೆ ಜಾಗರತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ವೃತ್ತಿ ನಿರ್ವಹಿಸುತ್ತಿರುವ ಪ್ರೀತೇಶ್ ಈ ಕೆಲಸ ಮಾಡುತ್ತಿದ್ದು, ದೇಶಕ್ಕಾಗಿ ಪ್ರಾಣಪ್ರ್ರಣೆ ಮಾಡಿದವರ ದಿವ್ಯ ಆತ್ಮಗಳಿಗೆ ಮೋಕ್ಷ ಸಿಗಲಿ, ಎಂದು 75 ದಿನಗಳ ಕಾಲ 75 ಮನೆಯಲ್ಲಿ ಅಖಂಡ ಜ್ಯೋತಿಯನ್ನು ಬೆಳಗಿಸುವ ಮೂಲಕ ಜನರಲ್ಲಿ ಹಾಗೂ ಮಕ್ಕಳಲ್ಲಿ ದೇಶಾಭಿಮಾನ ಮೂಡಿಸುತ್ತಿರುವುದಲ್ಲದೆ ಇತರರಿಗೆ ಮಾದರಿಯಾಗಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!