ಸರಳವಾಗಿ ವೈಕುಂಠದ್ವಾರ ಪ್ರವೇಶೋತ್ಸವ ಆಚರಣೆ
1 min read
ಚಿಕ್ಕಮಗಳೂರು: ವೈಕುಂಠ ಏಕಾದಶಿ ಹಿನ್ನೆಲೆ ಹಿರೇಮಗಳೂರು ಕೋದಂಡರಾಮಚಂದ್ರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠದ್ವಾರ ಪ್ರವೇಶೋತ್ಸವ ಹಾಗೂ ವೈಕುಂಠ ಏಕಾದಶಿ ಸೇವೆಯನ್ನು ಸರಳವಾಗಿ ಆಚರಣೆ ಮಾಡಲಾಯಿತು
ಉತ್ತರಾಯಣದ ಸಂಕ್ರಾಂತಿಯ ಸಮೀಪದಲ್ಲಿ ಧನುರ್ಮಾಸದ ಅಂಗವಾಗಿ ವೈಕುಂಠ ದ್ವಾರದ ಮೂಲಕ ದೇವರು ಬಂದು ಭಕ್ತರ ಸಂಕಷ್ಟಗಳನ್ನು ಕೇಳುತ್ತಾನೆ ಎಂಬುದು ನಂಬಿಕೆ. ಈ ಹಿನ್ನೆಲೆ ದೇವರಿಗೆ ಬೆಳಿಗ್ಗೆ ವಿಶೇಷ ಪೂಜೆ ಹಾಗೂ ಅಲಂಕಾರ ಮಾಡಿದ ಬಳಿಕ ವೈಕುಂಠದ್ವಾರದ ಮೂಲಕ ದೇವರನ್ನು ಕರೆತರುವ ಕಾರ್ಯವನ್ನು ಶಾಸ್ತ್ರೋಕ್ತವಾಗಿ ನೇರವೇರಿಸಲಾಯಿತು.
ಕೊರೊನಾ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅವಕಾಶವನ್ನು ನಿರ್ಬಂಧಿಸಿದ ಹಿನ್ನೆಲೆಯಲ್ಲಿ ಆನ್ಲೈನ್ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು. ಪುರೋಹಿತರು ಹಾಗೂ ಕೆಲವೇ ಮಂದಿ ಈ ಕಾರ್ಯವನ್ನು ನಡೆಸಿದ್ದು ದೇಶ ಕೊರೊನಾ ಮುಕ್ತವಾಗಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳಲಾಗಿದೆ ಎಂದು ಹಿರೇಮಗಳೂರು ಕಣ್ಣನ್ ತಿಳಿಸಿದರು. ಕಾರ್ಯಕ್ರಮದಲ್ಲಿ ಕೆಲವೇ ಕೆಲವು ಮಂದಿ ಭಾಗವಹಿಸಿದ್ದರು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g