ಕಾಫಿನಾಡಲ್ಲಿ ವರುಣನ ಆರ್ಭಟಕ್ಕೆ ಜನ ಜೀವನ ತತ್ತರ
1 min readಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಜಿಲ್ಲೆಯ ಮಲೆನಾಡ ಭಾಗದಲ್ಲಿ ಸಂಜೆಯಾಗುತ್ತಿದ್ದಂತೆ ವರುಣದೇವ ಮನಸ್ಸೋ ಇಚ್ಛೆ ಸುರಿದಿದ್ದಾನೆ. ಜಿಲ್ಲೆಯ ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಬಾಳೆಹೊನ್ನೂರು, ಶೃಂಗೇರಿಯಲ್ಲಿ ಭಾರಿ ಮಳೆಯಾಗಿದೆ. ಚಿಕ್ಕಮಗಳೂರು ನಗರದಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು ಅಗಾಗ್ಗೆ ತುಂತುರು ಮಳೆ ಸುರಿಯುತ್ತಿತ್ತು. ಆದರೆ, ಸಂಜೆಯಾಗುತ್ತಿದ್ದಂತೆ ಚಿಕ್ಕಮಗಳೂರು ನಗರದಲ್ಲೂ ಭಾರೀ ಮಳೆ ಸುರಿಯುತ್ತಿದೆ. ಇನ್ನೂ ಮಲೆನಾಡು ಭಾಗದಲ್ಲೂ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಸಂಜೆ ವೇಳೆಗೂ ಮಲೆನಾಡು ಭಾಗದಲ್ಲೂ ಧಾರಾಕಾರ ಮಳೆ ಸುರಿದಿದೆ. ಭಾರೀ ಮಳೆಯಿಂದ ಮಲೆನಾಡು ಭಾಗದಲ್ಲಿ ಅಲ್ಲಲ್ಲೇ ರಸ್ತೆ ಬದಿಯ ಮರಗಳು ಧರೆಗುರುಳಿರೋದ್ರಿಂದ ಮಲೆನಾಡ ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದೆ. ಮಳೆಗಾಗಿ ಆಕಾಶ ನೋಡುತ್ತಿದ್ದ ರೈತರ, ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಆದರೆ, ಇದರ ಜೊತೆಜೊತೆಗೆ ಮಳೆ ಅಂದರೆ ಮಲೆನಾಡಿಗರಿಗೆ ಭಯ ಕೂಡ ಉಂಟಾಗಿದೆ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ, https://www.youtube.com/channel/UCmBISI2sn_0gamb44UFj-vQ
Credits: Music : latest 2020 6 different no copyright news background music, royalty free (black mart)
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g