May 15, 2024

MALNAD TV

HEART OF COFFEE CITY

ಕ್ರಿಕೆಟ್ ಆಡಲು ಬಂದಿದ್ದ ಪಶುವೈದ್ಯ ಹೃದಯಾಘಾತದಿಂದ ಸಾವು

1 min read

ಚಿಕ್ಕಮಗಳೂರು: ಕ್ರಿಕೆಟ್ ಆಡಲು ಬಂದಿದ್ದ ಸೋಮವಾರ ಪೇಟೆ ಪಶುವೈದ್ಯನೊಬ್ಬ ಹೃದಯಾಘಾತದಿಂದ ಕ್ರೀಡಾಂಗಣದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ವಿಭಾಗ ಮಟ್ಟದ ಕ್ರಿಕೆಟ್ ಕ್ರೀಡಾಕೂಟಕ್ಕೆ ಆಗಮಿಸಿದ್ದ ಪಶುವೈದ್ಯ ಒಬ್ಬರು ಕ್ರೀಡಾಂಗಣದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.‌ ಶಿವಪ್ಪ ಬಾದಾಮಿ ಎಂಬು ಪಶುವೈದ್ಯ ಕ್ರಿಕೆಟ್ ಆಡಿ ಫೋಟೋ ಸೆಷೆನ್ ನಲ್ಲಿ ಪಾಲ್ಗೊಂಡು ನಂತರ ಕುಳಿತಿದ್ದ ಬಾದಾಮಿ ಕ್ರಿಕೆಟ್ ನೋಡುತ್ತಿದ್ದಂತೆ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಸೀವಿಯರ್ ಹಾರ್ಟ್ ಅಟ್ಯಾಕ್ ಆದಾಗ ಕೂಡಲೇ ಸ್ಥಳದಲ್ಲಿದ್ದ ಇತರೆ ವೈದ್ಯರು ಚಿಕಿತ್ಸೆಗೆ ಮುಂದಾದರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಬಾದಾಮಿ ಪ್ರಾಣ ಪಕ್ಷಿ ಹಾರಿ ಹೋಗಿದೆ. ಸದ್ಯ ಬಾದಾಮಿಯವರ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೈಸೂರು ವಿಭಾಗ ಮಟ್ಡದ ಪಶುವೈದ್ಯರ ಕ್ರೀಡಾ ಕೂಟದಲ್ಲಿ ಏಳು ಜಿಲ್ಲೆಗಳ 12 ಕ್ರಿಕೆಟ್ ತಂಡಗಳು ಭಾಗವಹಿಸಿದ್ದವು. ಚಿಕ್ಕಮಗಳೂರು ಪಶುವೈದ್ಯ ಸಂಘ ಆಯೋಜಿಸಿದ್ದ ಎರಡು ದಿನಗಳ ಕ್ರಿಕೆಟ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಕೊಡಗು ತಂಡ ಇಂದು ನಗರಕ್ಕೆ ಆಗಮಿಸಿ ಮೊದಲು ಒಂದು ಪಂದ್ಯ ಆಡಿತ್ತು. ಮ್ಯಾಚ್ ನಲ್ಲಿ ಉತ್ಸಾಹದಿಂದ ಆಡಿ ನಂತರ ಕುಳಿತಿದ್ದು ಸ್ಥಳದಲ್ಲಿ ಕುಸಿದು ಬಿದ್ದರು ಬೆಳಗಾವಿ ಜಿಲ್ಲೆಯ ಶಿವಪ್ಪ ಬಾದಾಮಿ ಅಕಾಲಿಕ ಮರಣಕ್ಕೆ ಪಶುವೈದ್ಯ ಲೋಕದ ಕಂಬನಿ ಮಿಡಿದಿದೆ. ನಂತರ ಕ್ರೀಡಾಕೂಟ ಸ್ಥಗಿತಗೊಳಿಸಲಾಯಿತು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!