April 30, 2024

MALNAD TV

HEART OF COFFEE CITY

ಎಪಿಎಂಸಿ ಅಧ್ಯಕ್ಷರಾಗಿ ವಿಕ್ರಾಂತ್ ಆಯ್ಕೆ

1 min read

ಚಿಕ್ಕಮಗಳೂರು: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಮೂಗ್ತಿಹಳ್ಳಿ ಕ್ಷೇತ್ರದ ಎಂ.ಎಸ್.ವಿಕ್ರಾಂತ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ಅಭಿನಂದಿಸಿ ಮಾತನಾಡಿ, ಬಿಜೆಪಿ ಪಕ್ಷದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದವರನ್ನು ಪಕ್ಷ ಗುರುತಿಸಿ ಉತ್ತಮ ಸ್ಥಾನ ನೀಡುತ್ತದೆ, ಪಕ್ಷ ನೀಡಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಮಾಡಬೇಕು, ತಮ್ಮ ಅಧಿಕಾರ ಅವಧಿಯಲ್ಲಿ ಉತ್ತಮ ಕೆಲಸಗಳ ಮೂಲಕ ಜನರ ಮತ್ತು ರೈತರ ವಿಶ್ವಾಸ ಗಳಿಸಬೇಕೆಂದರು.
ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತಸ ತಂದಿದೆ. ರೈತರು ಹಾಗೂ ವರ್ತಕರಿಗೆ ಅನುಕೂಲವಾಗುವಂತೆ ಎಂಪಿಎಂಸಿಯಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಕಾರ್ಯ ರೂಪಿಸುವಂತೆ ಸಲಹೆ ನೀಡಿ, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಜಾರಿಗೊಳಿಸಿರುವ ಎಂಪಿಎಂಸಿ ತಿದ್ದು ಪಡಿ ಕಾಯ್ದೆಯನ್ನು ಸಮಗ್ರವಾಗಿ ಅನುಷ್ಠಾನಗೊಳಿಸಿ ರೈತ ಪರವಾಗಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವಂತೆ ತಿಳಿಸಿದರು.
ನೂತನ ಎಂಪಿಎಂಸಿ ಅಧ್ಯಕ್ಷ ಎಂ.ಎಸ್.ವಿಕ್ರಾಂತ್ ಮಾತನಾಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷನಾಗಿ ನನ್ನನ್ನು ಆಯ್ಕೆಗೊಳಿಸಿರುವುದು ಸಂತಸ ತಂದಿದೆ, ತಮ್ಮ ಅವಧಿಯಲ್ಲಿ ಯೋಜನೆಗಳನ್ನು ಉತ್ತಮವಾಗಿ ಅನುಷ್ಠಾನಗೊಳಿಸಲಾಗುವುದು ಎಂದರು.

ಬಿಜೆಪಿ ಜಿಲ್ಲಾಪ್ರಧಾನ ಕಾರ್ಯದರ್ಶಿ ದೇವರಾಜ್‍ಶೆಟ್ಟಿ, ನಗರಸಭೆ ಸದಸ್ಯ ವರಸಿದ್ಧಿವೇಣುಗೋಪಾಲ್, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್, ಉಪಾಧ್ಯಕ್ಷ ಎನ್.ಲಕ್ಷ್ಮಣ್‍ಗೌಡ, ಕಾರ್ಯದರ್ಶಿ ಎಂ.ಸಿ.ಪ್ರಕಾಶ್, ಜಿ.ಪಂ ಮಾಜಿ ಸದಸ್ಯ ಬೆಳವಾಡಿ ರವೀಂದ್ರ, ಕುರುವಂಗಿ ವೆಂಕಟೇಶ್, ಈಶ್ವರಹಳ್ಳಿ ಮಹೇಶ್, ದೀಪಕ್ ದೊಡ್ಡಯ್ಯ, ಕನಕರಾಜ್, ಪುಷ್ವರಾಜ್, ಸತೀಶ್, ಸೀತಾರಾಮ್‍ಭರಣ್ಯ, ಹಂಪಯ್ಯ, ಸಂದೀಪ್, ಎಪಿಎಂಸಿ ಸದಸ್ಯರಾದ ಕವೀಶ್, ಶಿವೇಗೌಡ, ರಾಜೀವ್,ಬಸವರಾಜ್, ಮಹೇಂದ್ರ, ಹರೀಶ್, ಶೇಖರ್, ಗಾಯತ್ರಿ ಇದ್ದರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!