ತನಿಖೆ ಪೂರ್ಣಗೊಳ್ಳುವವರೆಗೂ ಕಾಯಬೇಕು ಬಿ.ಜೆ.ಪಿ. ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ
1 min readಚಿಕ್ಕಮಗಳೂರು : ಶಾಸಕ ಯತ್ನಾಳ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ನಗರಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ಜೆ.ಪಿ. ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಸಿಡಿ ಪ್ರಕರಣದ ಬಗ್ಗೆ ಎಸ್.ಐ.ಟಿ. ತನಿಖೆ ನಡೆಯುತ್ತಿದೆ. ಸತ್ಯಾಸತ್ಯತೆ ಏನೂ ಅನ್ನೋದು ಇನ್ನೂ ಹೊರಬೇಕಾಗಿದೆ ಅಲ್ಲಿಯವರೆಗೂ ಕಾಯಬೇಕಾಗುತ್ತದೆ ಎಂದು ಹೇಳಿದರು.
ನಾನು ಕೂಡ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ, ನಾನು ನರೇಂದ್ರ ಮೋದಿಯ ಬೆಂಬಲಿಗನೂ ಹೌದು. ಹಿಂದೂ ಕಾರ್ಯಕರ್ತನೂ ಹೌದು ನನಗೆ ಹೆಮ್ಮೆ ಇದೆ. ಯತ್ನಾಳ್ ಅವ್ರು ಹಿರಿಯರು ಇದ್ದಾರೆ, ಅವತ್ತೆ ಹೇಳಿದ್ದೆ ನನ್ನ ಬಗ್ಗೆ ಅವರಿಗೆ ಪ್ರೀತಿ ಇದೆ ಅಂತ, ಪ್ರೀತಿಯಿಂದ ಮಾತನಾಡ್ತಾರೆ ಬೇಸರವಿಲ್ಲ. ಸಿಡಿ ಪ್ರಕರಣದ ಬಗ್ಗೆ ಎಸ್.ಐ.ಟಿ. ತನಿಖೆ ನಡೆಯುತ್ತಿದೆ. ಸತ್ಯಾಸತ್ಯತೆ ಏನೂ ಅನ್ನೋದು ಇನ್ನೂ ಹೊರಬೇಕಾಗಿದೆ. ಇದರ ಹಿಂದೆ ಯಾರಿದ್ದಾರೆ, ಯಾರ ಕೈವಾಡವಿದೆ. ಇದರ ಹಿಂದೆ ಅಗ್ರಗಣ್ಯ ನಾಯಕರು ಸೇರಿಕೊಂಡಿದ್ದಾರಾ ಎಂಬುದು ತನಿಖೆಯ ನಂತರ ಗೊತ್ತಾಗುತ್ತೆ. ಅಲ್ಲಿಯವರೆಗೂ ಕಾಯಬೇಕಾಗುತ್ತದೆ ಎಂದು ಹೇಳಿದರು.
ಇದೇ ವೇಳೆ ಸಿಎಂ ಪುತ್ರ ವಿಜಯೇಂದ್ರನ ಮುಂದೆ ಕಣ್ಣೀರಿಟ್ಟ ಮಹಿಳೆ. ನಾಯ್ಯಕ್ಕಾಗಿ ಅಂಗಲಾಚಿದರು. ನ್ಯಾಯ ಕೊಡಿ ಇಲ್ಲವೇ ದಯಾಮರಣ ಕೊಡಿ ಎಂದು ಆಕ್ರೋಶವ್ಯಕ್ತಪಡಿಸಿದರು. ವಿಜಯೇಂದ್ರನ ಕಾರಿನ ಹತ್ತಿರ ಕಣ್ಣೀರಿಟ್ಟ ಕುಟುಂಬಸ್ಥರು, ಪೊಲೀಸ್ ಠಾಣೆಗೆ ದೂರು ನೀಡಿದರೆ ನ್ಯಾಯ ಸಿಗುತ್ತಿಲ್ಲ ಎಂದು ಅಳಲು ತೋಡಿಕೊಂಡರು. ಸೂಕ್ತ ನ್ಯಾಯಾ ನೀಡುವಂತೆ ಸಿಎಂ ಪುತ್ರನಿಗೆ ಮನವಿ ಸಲ್ಲಿಸಿದ ಕುಟುಂಬಸ್ಥರು ತರೀಕೆರೆ ಲಕ್ಕವಳ್ಳಿ ಸಮೀಪ ಚಿಕ್ಕಮಗಳೂರು ಮೂಲದ ಪ್ರಸನ್ನ ಜಮೀನು ಖರೀದಿ ಮಾಡಿದ್ದರು, 7 ವರ್ಷದ ಹಿಂದೆ ಪ್ರಸನ್ನ ಕುಟುಂಬ ಲಕ್ಕವಳ್ಳಿಯಲ್ಲಿ 50 ಎಕರೆ ಜಮೀನು ಖರೀದಿ ಮಾಡಿತ್ತು. ತರೀಕೆರೆ ಶಾಸಕ ಸುರೇಶ್ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪ ಮಾಡಿದ ಅವರು ಪ್ರಕರಣ ನ್ಯಾಯಾಲಯದಲ್ಲಿದ್ದರೂ ಶಾಸಕರು ಹಿಂಬಾಲಕರ ಮೂಲಕ ಹಲ್ಲೆ ನಡೆಸುತ್ತಿದ್ದಾರೆ. ನಮಗೆ ನ್ಯಾಯ ಕೊಡಿ ಇಲ್ಲವೆ ದಯಾಮರಣ ಕೊಡಿ ಎಂದು ಗೋಗರೆದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g