ಮಳೆಯಿಂದ 391.57 ಕೋಟಿ ನಷ್ಟದ ವರದಿ ಸರ್ಕಾರಕ್ಕೆ ನೀಡಿದ್ದೇವೆ : ಡಿ.ಸಿ ರಮೇಶ್
1 min readಜಿಲ್ಲೆಯಲ್ಲಿ ಮಳೆಯಿಂದ ಒಟ್ಟು 391.57 ಕೋಟಿ ರೂ ನಷ್ಟವಾಗಿದೆ ಎಂದು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ ಎನ್ ರಮೇಶ್ ತಿಳಿಸಿದ್ದಾರೆ.
ತಮ್ಮ ಕಚೇರಿಯಲ್ಲಿ ಪತ್ರಕರ್ತರಿಗೆ ಈ ಬಗ್ಗೆ ಮಾಹಿತಿ ನೀಡಿದ ಅವರು ಜಿಲ್ಲೆಯಾದ್ಯಂತ 945ಮನೆಗಳ ಹಾನಿಯಾಗಿದ್ದು ಇದರಲ್ಲಿ ಭಾಗಶಃ 90 ಕುಟುಂಬಗಳಿಗೆ ಪರಹಾರ ನೀಡಲಾಗಿದೆ, ಒಟ್ಟು ಜಿಲ್ಲೆಯಲ್ಲಿ 329 ಕಿಲೋಮೀಟರ್ ರಸ್ತೆ ಹಾಳಾಗಿದ್ದು 327 ಕಿಲೋಮೀಟರ್ ರಾಜ್ಯ ಹೆದ್ದಾರಿ ಹಾನಿಯಾಗಿದೆ ಎಂದು ಲೋಕೋಪಯೋಗಿ ಇಲಾಖೆ ವರದಿ ನೀಡಿದೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಮಳೆಯಿಂದ ಮೆಸ್ಕಾಂ ನ 1910 ಕಂಬಗಳು ಉರುಳಿದ್ದು, 602 ಶಾಲಾ ಕೊಠಡಿಗಳು ಹಾನಿಯಾಗಿವೆ,
195 ಅಂಗನವಾಡಿಗಳು ಬಿದ್ದಿದ್ದು, ಒಟ್ಟು 6 ಜೀವಹಾನಿಯಾಗಿವೆ 36 ಕೋಟಿ ಹಣ ಮೀಸಲಿಡಲಾಗಿದೆ ಎಂದು ತಿಳಿಸಿದರು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g