ಚುನಾವಣೆಯಲ್ಲಿ ಫಲಿತಾಂಶ ಏನಿದೆ.. ಅದೇ ರಾಜಕಾರಣ; ಇಂಧನ ಸಚಿವ ಕೆ.ಜೆ.ಜಾರ್ಜ್
1 min readಚಿಕ್ಕಮಗಳೂರು: ಬೆಳಗಾವಿಯಲ್ಲಿ ರಾಜಕಾರಣ ಎಲ್ಲಿದೆ.. ಅಲ್ಲಿ ರಾಜಕಾರಣವೇ ಇಲ್ಲ ಅಲ್ಲಿ ಯಾರೋ…ಏನೋ… ಹೇಳುದ್ರು… ಅದಲ್ಲ ರಾಜಕಾರಣ…ಚುನಾವಣೆಯಲ್ಲಿ ಫಲಿತಾಂಶ ಏನಿದೆ.. ಅದೇ ರಾಜಕಾರಣ ಎಂದು ಚಿಕ್ಕಮಗಳೂರಿನಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
68 ನೇ ಕನ್ನಡ ರಾಜ್ಯೋತ್ಸವ ಆಚರಣೆಯ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ, ಎಲ್ಲರೂ ಅವರವರ ಅಭಿಪ್ರಾಯ ಹೇಳಲು ಅವಕಾಶವಿದೆ. ಪಕ್ಷಕ್ಕೆ ಸಂಬಂಧಿಸಿದಂತ ತೀರ್ಮಾನವನ್ನ ಸಿಎಂ, ಡಿಸಿಎಂ, ಹೈಕಮಾಂಡ್ ನೋಡಿಕೊಳ್ಳುತ್ತೆ. ಬೆಳಗಾವಿಯಲ್ಲಿ ರಾಜಕಾರಣವೇ ಇಲ್ಲ…ಎಲ್ಲಿದೆ…? ಚುನಾವಣೆಯಲ್ಲಿ ಬೆಳಗಾವಿಯಲ್ಲಿ ಏನಾಯ್ತು… ಅದೇ ರಾಜಕಾರಣ… ನಮಗೆ ಯಾವುದೇ ಅಸಮಾಧಾನ ಇಲ್ಲ, ಕಾಂಗ್ರೆಸ್ಸಿನ ನಾವೆಲ್ಲಾ ಒಗ್ಗಟ್ಟಿನಿಂದ ಇದ್ದೇವೆ. ಕಾಂಗ್ರೆಸ್ ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ ನಮ್ಮದು. ರಾಜ್ಯದಲ್ಲಿ ಎಂ.ಇ.ಎಸ್. ಪುಂಡಾಟಿಕೆ ಏನೂ ನಡೆಯಲ್ಲ ಎಂದು ಹೇಳಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g