ನಾಯಕತ್ವ ಬದಲಾವಣೆ ಬಗ್ಗೆ ಯೋಚಿಸಿದ್ರೆ ನಮ್ಮಂತಹ ಮೂರ್ಖರು ಯಾರು ಇಲ್ಲ ಎಂ.ಪಿ. ಕುಮಾರಸ್ವಾಮಿ
1 min readಮೂಡಿಗೆರೆ : ಕೊರೋನಾ ವ್ಯಾಕ್ಸಿನ್ಗಾಗಿ ಜನ ಹೋರಾಡ್ತಿದ್ದಾರೆ. ಹೊಡೆದಾಡ್ತಿದ್ದಾರೆ. ಆದರೆ, ಯಾರದ್ದೋ ಹೆಸರಲ್ಲಿ ಮತ್ಯಾರೋ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಅಧಿಕಾರಿಗಳೇ ಮುಂದಾಳತ್ವ ವಹಿಸಿರೋ ಆರೋಪ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಕೇಳಿ ಬಂದಿದೆ. ಕಳೆದ ನಾಲ್ಕು ದಿನಗಳ ಹಿಂದೆ ಮೂಡಿಗೆರೆ ತಾಲೂಕಿನ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ವ್ಯಾಕ್ಸಿನ್ ನೀಡಲಾಗಿತ್ತು. ಈ ವೇಳೆ, ಅರಣ್ಯ ಇಲಾಖೆಯ ಸುಮಾರು 50 ಜನರಿಗೆ ವ್ಯಾಕ್ಸಿನ್ ನೀಡಿದ್ದರು. ಆದರೆ, ಈ ವೇಳೆ, ಅರಣ್ಯ ಇಲಾಖೆಯಲ್ಲಿ ಕೆಲಸವನ್ನೇ ಮಾಡದ ವ್ಯಕ್ತಿಗೂ ಅರಣ್ಯ ಇಲಾಖೆ ಸಿಬ್ಬಂದಿ ಎಂದು ವ್ಯಾಕ್ಸಿನ್ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕೆ.ಎನ್.ಸೋಮಶೇಖರ್ ಎಂಬ ವ್ಯಕ್ತಿ ಮೂಡಿಗೆರೆ ತಾಲೂಕಿನ ಅರಣ್ಯ ಇಲಾಖೆಯಲ್ಲಿ ಕೆಲಸವನ್ನೇ ಮಾಡುತ್ತಿಲ್ಲ. ಆದರೆ, ಮೂಡಿಗೆರೆಯ ಆರ್.ಎಫ್.ಓ. ಅವರು ನಮ್ಮ ಇಲಾಖೆಯ ಡಿ ದರ್ಜೆ ನೌಕರ ಎಂದು ಲೆಟರ್ ನೀಡಿದ್ದಾರೆ. ವ್ಯಾಕ್ಸಿನ್ಗೆ ಹೋದ ಪಟ್ಟಿಗೆ ತಾವೇ ಸಹಿ ಹಾಕಿ ಕಳಿಸಿದ್ದಾರೆ ಎಂದು ಆರೋಪಿಸಿರೋ ಸ್ಥಳಿಯರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಸ್ಥಳಿಯರು ತಹಶೀಲ್ದಾರ್ ಅವರಿಗೂ ದೂರು ನೀಡಿದ್ದಾರೆ. ಈ ಬಗ್ಗೆ ತಹಶೀಲ್ದಾರ್ ಕೂಡ ಕಾರಣ ಕೇಳಿ ಆರ್.ಎಫ್.ಓಗೆ ನೋಟಿಸ್ ನೀಡಿದ್ದಾರೆ. ಈಗಾಗಲೇ ವ್ಯಾಕ್ಸಿನ್ ಹಾಹಾಕಾರ ಶುರುವಾಗಿದೆ. 50 ವ್ಯಾಕ್ಸಿನ್ ಬಂದರೆ 100 ಜನ ಬರುತ್ತಾರೆ. ವ್ಯಾಕ್ಸಿನ್ಗಾಗಿ ಜನ ಹಾಹಾಕಾರ ಅನುಭವಿಸುತ್ತಿದ್ದಾರೆ. ಆದರೆ, ಅಧಿಕಾರಿಗಳು ಈ ರೀತಿ ಬೇಕಾದವರಿಗೆ ನಕಲಿ ದಾಖಲೆ ಕೊಟ್ಟು ವ್ಯಾಕ್ಸಿನ್ ಹಾಕಿಸೋದು ಎಷ್ಟು ಸರಿ. ಈ ಬಗ್ಗೆ ಎಸ್ಪಿ ಹಾಗೂ ಡಿಸಿಗೂ ದೂರು ನೀಡುತ್ತೇವೆ ಎಂದು ಸ್ಥಳಿಯರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಆರ್.ಎಫ್.ಓ. ಹೀಗೆ ನಕಲಿ ದಾಖಲೆ ಕೊಟ್ಟು ವ್ಯಾಕ್ಸಿನ್ ಹಾಕಿಸಿದ ಕೆ.ಎನ್.ಸೋಮಶೇಖರ್ ಎಂಬ ವ್ಯಕ್ತಿ ಮೂಡಿಗೆರೆಯ ಎ.ಸಿ.ಎಫ್ ಪತಿ ಎಂಬ ಮಾತುಗಳು ಕೇಳಿ ಬಂದಿವೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g