April 29, 2024

MALNAD TV

HEART OF COFFEE CITY

ಜಿಲ್ಲಾ ಉಸ್ತುವಾರಿ ಸಚಿವರಿಗೆ ಪ್ರವಾಹ ಸಂತ್ರಸ್ತರು ಬಿಕ್ಷೆ ಬೇಡುತ್ತೇವೆ ಎಂದದ್ದು ಏಕೆ ?

1 min read
Why is the Minister in charge of the flood victims needing a Bikkhu?

Why is the Minister in charge of the flood victims needing a Bikkhu?

ಮೂಡಿಗೆರೆ  : ತಾಳ್ಮೆಯ ಕಟ್ಟೆ ಹೊಡೆದರೆ ಜನ ಸಾಮಾನ್ಯ ಯಾರನ್ನು ಬಿಡುವುದಿಲ್ಲ, ಎನ್ನುವಂತೆ ಪ್ರವಾಹ ಸಂತ್ರಸ್ತರ ಭೇಟಿಗೆ ತೆರಳಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹಾಗೂ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಪ್ರವಾಹ ಸಂತ್ರಸ್ತರು ತರಾಟೆ ತೆಗೆದುಕೊಂಡಿದ್ದಾರೆ.

2019ರಲ್ಲಿ ಸುರಿದ ಮಹಾಮಳೆಯಿಂದ 5 ಮನೆಗಳು, 40 ಎಕರೆ ಜಮೀನು ಸಂಪೂರ್ಣ ಕೊಚ್ಚಿ ಹೋಗಿ, ಮನೆ, ಆಸ್ತಿಯನ್ನು ಕಳೆದುಕೊಂಡು ಸಂತ್ರಸ್ತರಾಗಿದ್ದ ನಿವಾಸಿಗಳ ಬದುಕು ಬೀದಿಗೆ ಬಿದ್ದಿತು. 2019ರಲ್ಲಿ ಪ್ರವಾಹದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಗ್ರಾಮಕ್ಕೆ ಭೇಟಿ ನೀಡಿದ್ದು ಬಿಟ್ಟರೆ ಸರ್ಕಾರ ಇಲ್ಲಿಯವರೆಗೆ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆ ಮಾಡದ ಹಿನ್ನೆಲೆ ಆಕ್ರೋಶಗೊಂಡಿದ್ದರು. ಮೂಡಿಗೆರೆ ತಾಲೂಕಿನ ಮಲೆಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹಾಗೂ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಭೇಟಿ  ನೀಡಿದ ಸಂದರ್ಭದಲ್ಲಿ ತಾಳ್ಮೆಯ ಕಟ್ಟೆ ಹೊಡೆದಿದ್ದ ಸಂತ್ರಸ್ತರು ಇಬ್ಬರನ್ನು ತರಾಟೆಗೆ ತೆಗೆದುಕೊಂಡರು.  ಮೂರು ವರ್ಷವಾದರೂ ಮನೆಕಟ್ಟಿ ಕೊಟ್ಟಿಲ್ಲ, ಆಗಲ್ಲ ಅಂದ್ರೆ ಹೇಳಿ ಸಾಯುತ್ತೇವೆ ಇಲ್ಲಾ ಹೇಗೊ ಬದುಕುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬರಿ ಆಶ್ವಾಸನೆ ಕೊಡುವುದಾದರೆ ಯಾವುದಕ್ಕೆ ಬರಬೇಕು. ನಾವು ಜಿಲ್ಲಾಧಿಕಾರಿಗಳ ಕಛೇರಿಗೆ ಅಲೆದು ಅಲೆದು ಸಾಕಾಗಿದೆ. ಅಧಿಕಾರಿಗಳು ಹೇಳಿದಂತೆ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ಸೌಲಭ್ಯಗಳಿಲ್ಲದ ಜಾಗ ತೋರಿಸಿದರೆ ಹೇಗೆ ಬದುಕುವುದು. ನಾವು ಮನುಷ್ಯರಲ್ಲವೆ. ಆಗಲ್ಲ ಅಂದ್ರೆ ಆಗಲ್ಲ ಎಂದು ಬರವಣಿಗೆಯಲ್ಲಿ ಕೊಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂತ್ರಸ್ತರ ನೋವಿನ ಕೂಗು ಕೇಳಿದ ಎಸ್. ಅಂಗಾರ ನಿಮ್ಮ ಕಷ್ಟ ನನಗೆ ಅರ್ಥವಾಗುತ್ತದೆ. ನಾನು ಈಗ ಬಂದಿರುವುದು ನಿಮ್ಮ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಲು. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಇವರು ಈಗ ಕೊಟ್ಟ ಭರವಸೆಯು ಹತ್ತರ ಜೊತೆ ಹನ್ನೊಂದು ಆಗುವುದೆ, ಅಥವಾ ಸಂತ್ರಸ್ತರ ಬದುಕಿಗೆ ಶಾಶ್ವತ ಪರಿಹಾರ ನೀಡುವುದೆ ಕಾದು ನೊಡಬೇಕು.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ, https://www.youtube.com/channel/UCmBISI2sn_0gamb44UFj-vQ

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ https://drive.google.com/file/d/1NAncco3HJMY9rgMxE4KXBh69G-O67_A_/view?usp=sharing

 

Credits:

Music : latest 2020 6 different no copyright news background music, royalty free (black mart)

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!