36 ಡಿಗ್ರಿ ಉಷ್ಣಾಂಶ ದಾಖಲಿಸಿದ್ದ ಮಲೆನಾಡಲ್ಲಿ ಗಾಳಿ ಮಳೆ
1 min read
ಬಿರುಬಿಸಿಲಿನಿಂದ ಬೆಂಕಿ ಚೆಂಡಾಗಿ ದಾಖಲೆ 36 ಡಿಗ್ರಿಯ ಉಷ್ಣಾಂಶವಿದ್ದ ಮಲೆನಾಡ ತಾಲ್ಲೂಕುಗಳಲ್ಲಿ ವರುಣ ಧರೆಯನ್ನು ತಂಪು ಮಾಡಿದ್ದಾನೆ. ಗಾಳಿ ಮಳೆಗೆ ಭುವಿ ತಣ್ಣಗಾಗಿ ಮರಗಳು ನೆಲಕ್ಕುರುಳಿ ಅವಾಂತರ ಸೃಷ್ಟಿಯಾಗಿದೆ.
ಬಯಲುಸೀಮೆ ನಾಚಿಸುವಂತೆ ಬಿರು ಬೇಸಿಗೆಯಿಂದ ಕಾದ ಕಾವಲಿಯಂತಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಕಳೆದ ಎರಡು ಮೂರು ದಿನಗಳಲ್ಲಿ ಅಲ್ಲಲ್ಲಿ ಮಳೆಯಾಗಿದೆ. ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸಿದ್ದು, ಬಿರುಗಾಳಿ-ಮಳೆಗೆ ರಸ್ತೆಗೆ ಅಡ್ಡಲಾಗಿ ಬೃಹತ್ ಗಾತ್ರದ ಮರವೊಂದು ಬಿದ್ದಿದೆ.
ಚಿಕ್ಕಮಗಳೂರು ತಾಲೂಕಿನ ಶಿರಗೋಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಖಾಂಡ್ಯ, ಸಂಗಮೇಶ್ವರ ಪೇಟೆ, ಜೇನುಗದ್ದೆ, ಶಿರಗೋಳ ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ಶಿರಗೋಳ ಗ್ರಾಮದ ರಸ್ತೆಗೆ ಈ ಬೃಹತ್ ಗಾತ್ರದ ಅರಳಿ ಮರ ಬಿದ್ದಿದೆ
ಭಾರೀ ಗಾಳಿಗೆ ಅರಳಿಮರ ನೆಲ ಸಮಗೊಂಡಿದ್ದು, ಸಂಗಮೇಶ್ವರ ಪೇಟೆಯ ಶಾಲೆಯ ಕಾಂಪೌಂಡ್ ಮೇಲೆ ಮರ ಉರುಳಿದೆ. ಗಾಳಿ ಮಳೆಯಿಂದಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಸಹಾ ಕಡಿತಗೊಂಡಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ವ್ಯಾಪ್ತಿಯ ಹಲವು ಗ್ರಾಮಗಳಿಗೆ ರಸ್ತೆ ಸಂಚಾರ ವ್ಯತ್ಯಯವಾಗಿತ್ತು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g