May 15, 2024

MALNAD TV

HEART OF COFFEE CITY

ಛಾಯಾಗ್ರಾಹಕರ ಸಂಘದಿಂದ ವಿಶ್ವ ಛಾಯಾಗ್ರಾಹಕರ ದಿನ ಆಚರಣೆ

1 min read

ಚಿಕ್ಕಮಗಳೂರು : 183 ನೇ ವಿಶ್ವ ಛಾಯಾ ಗ್ರಾಹಕರ ದಿನಾಚರಣೆಯನ್ನು ಜಿಲ್ಲಾ ಛಾಯಾಗ್ರಾಹಕರ ಸಂಘ ಹಾಗೂ ತಾಲೂಕು ಛಾಯಾ ಗ್ರಾಹಕರ ದಿನಾಚರಣೆಯನ್ನು ಕಾಮದೇನು ಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಆಚರಿಸಲಾಯಿತು.

ರತ್ನಗಿರಿ ರಸ್ತೆಯಲ್ಲಿರುವ ಕಟ್ಟಡದಲ್ಲಿ ನೂತನವಾಗಿ ಆರಂಭಿಸಿರುವ ಜಿಲ್ಲಾ ಮತ್ತು ತಾಲೂಕು ಛಾಯಾಗ್ರಾಹಕರ ಸಂಘದ ಕಛೇರಿಯನ್ನು ವರಸಿದ್ಧಿ ವೇಣುಗೋಪಾಲ್ ಉದ್ಘಾಟಿಸಿದರು. ಕಛೇರಿ ಉದ್ಘಾಟನೆಗೂ ಮುನ್ನ ಶ್ರೀ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ಕ್ಯಾಮರಗಳಿಗೆ ಪೂಜೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಛಾಯಾಗ್ರಾಹಕ ಸಂಘದ ಜಿಲ್ಲಾಧ್ಯಕ್ಷರಾದ ಜಯಚಂದ್ರರವರು ವಹಿಸಿಕೊಂಡಿದ್ದು, ವೇದಿಕೆಯಲ್ಲಿ ಆಶ್ರಯ ಸಮಿತಿ ಅಧ್ಯಕ್ಷರಾದ ನಾರಾಯಣಸ್ವಾಮಿ, ಬಿಜೆಪಿ ಮುಖಂಡರಾದ ಲೋಕೇಶ್, ಜಿಲ್ಲಾ ಛಾಯಾಗ್ರಾಹಕ ಸಂಘದ ಕಾರ್ಯದರ್ಶಿ ರೇಣುಕಪ್ಪ, ತಾಲೂಕು ಉಪಾಧ್ಯಕ್ಷರಾದ ರವಿ, ತಾಲೂಕು ಕಾರ್ಯದರ್ಶಿಯಾದ ಸಿ. ಡಿ ವಿನಯ್, ತಾಲೂಕು ಖಜಾಂಚಿ ಸುನಿಲ್ ಸೇರಿದಂತೆ ಸಂಘದ ಸದಸ್ಯರು ಪಾಲ್ಗೊಂಡಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!