May 2, 2024

MALNAD TV

HEART OF COFFEE CITY

ಬಡ ಕುಡುಂಬದ ಚಿಂತಾಜನಕ ಸ್ಥಿತಿ, ಮಮ್ಮಲ ಮರುಗಿದ ಸಚಿವರಿಂದ ಧನ ಸಹಾಯ

1 min read

ಚಿಕ್ಕಮಗಳೂರು : ಮಲೆನಾಡಿನ ಮಹಾಮಳೆಗೆ ಮಲೆನಾಡಿಗರ ಬದುಕು ಅಯೋಮಯವಾಗಿದ್ದು, ಮಳೆಯ ಆರ್ಭಟಕ್ಕೆ ಕುಸಿದ ಮನೆಯಲ್ಲಿ ಟಾರ್ಪಲ್ ಕಟ್ಟಿಕೊಂಡು ಬದುಕು ಸಾಗಿಸುತ್ತಿರುವ ಬಡ ಕುಟುಂಬದ ಕರುಣಾಜನಕ ಘಟನೆ ಕೊಟ್ಟಿಗೆಹಾರ ಸಮೀಪದ ಆಜಾದ್ ನಗರದಲ್ಲಿ ನಡೆದಿದೆ.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಆಜಾದ್ ನಗರದಲ್ಲಿ ವಾಸವಾಗಿರುವ ಲೀಲಾ ಎಂಬುವವರ ಮನೆಯು ಸುರಿಯುತ್ತಿರುವ ಮಳೆಗೆ ಕುಸಿದು ಬಿದಿದ್ದೆ, ಮಳೆಯ ನಡುವೆಯು ತನಗೆ ಇರುವ ನಾಲ್ಕು ಮಕ್ಕಳೊಂದಿಗೆ ಬದುಕು ಸಾಗಿಸಬೇಕಾಗಿರುವುದರಿಂದ, ಬಿದ್ದ ಮನೆಗೆ ಟಾರ್ಪಲ್ ಕಟ್ಟಿಕೊಂಡು ಬದುಕು ಸಾಗಿಸುತ್ತಿದ್ದಾರೆ. ಮಳೆಯ ತೇವಕ್ಕೆ ಮನೆಯೊಳಗೆಯೂ ಸಹ ನೀರು ಜಿನುಗುತ್ತಿದ್ದು, ಶೀತದ ಮನೆಯಲ್ಲೇ ಜೀವನ ಸಾಗಿಸುತ್ತಿದ್ದು, ನಾಲ್ಕು ಜನ ಮಕ್ಕಳಲ್ಲಿ ಬಡತನದ ಬೇಗೆಯಿಂದ ಓರ್ವ ಮಗಳು ಶಾಲೆ ಬಿಟ್ಟು ಕೂಲಿಗೆ ಹೋಗಿ ಕುಟುಂಬಕ್ಕೆ ನೆರವಾಗುತ್ತಿದ್ದರೆ, ಉಳಿದ ಮಕ್ಕಳು ಓದಲು ತೊಂದರೆಯಾಗುತ್ತಿದೆ. ಆದಷ್ಟು ಬೇಗ ಜಿಲ್ಲಾಡಳಿತ ಹಾಗೂ ಸ್ಥಳೀಯ ಜನಪ್ರತಿನಿಧಗಳು ಇವರ ಕುಟುಂಬಕ್ಕೆ ನೆರವಾಗುವಂತೆ ಸ್ಥಳೀಯರ ಒತ್ತಾಯವಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಮನೆ ಕಳೆದುಕೊಂಡ ಲೀಲಾ ಕುಟುಂಬದ ಪರಿಸ್ಥಿತಿಯನ್ನು ಕಂಡು ಮಮ್ಮಲ ಮರುಗಿದ ಸಚಿವರು, ಮಕ್ಕಳ ವಿದ್ಯಾಭ್ಯಾಸಕ್ಕೆಂದು ತಮ್ಮ ಜೇಬಿನಿಂದ 50 ಸಾವಿರ ರೂಪಾಯಿಗಳ ಧನ ಸಹಾಯದ ನೆರವು ನೀಡಿದರು.

ಈ ವೇಳೆ ಮಾತನಾಡಿದ ಅವರು ಅತಿವೃಷ್ಠಿಯಿಂದ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಹಲವು ಕಡೆಗಳಲ್ಲಿ ಮನೆಗಳು ಕುಸಿದು ಬಿದಿದ್ದೆ, ಈಗಾಗಲೇ ಮನೆ ಕಳೆದುಕೊಂಡ ಕುಟುಂಬಗಳಿಗೆ ಪರಿಹಾರದ ಚೆಕ್ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಬೆಳೆ ಹಾನಿಯಿಂದ ನಷ್ಟಕ್ಕೆ ಒಳಗಾಗಿರುವ ಕುಟುಂಬಕ್ಕೆ ಅಗತ್ಯ ನೆರವು ನೀಡಲಿದ್ದೇವೆ ಎಂದು ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!