April 28, 2024

MALNAD TV

HEART OF COFFEE CITY

ಮೈಸೂರು-ಕೊಡಗು ಬಿಜೆಪಿ ಸ್ಪರ್ಧೆಗೆ ಹೆಸರು ಕೇಳಿ ಬರುತ್ತಿರುವ ಬೆನ್ನಲ್ಲೇ ಯದುವೀರ್ ಟೆಂಪಲ್ ರನ್

1 min read

 

 

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಸ್ಪರ್ಧೆಗೆ ಹೆಸರು ಕೇಳಿ ಬರುತ್ತಿರುವ ಬೆನ್ನಲ್ಲೇ ರಾಜವಂಶಸ್ಥ ಯದುವೀರ್ ಒಡೆಯರ್ ಟೆಂಪಲ್ ರನ್ ನಲ್ಲಿ ತೊಡಗಿದ್ದು ಶೃಂಗೇರಿಯ ಶಾರದಾಂಭೆ ದರ್ಶನ ಪಡೆದಿದ್ದಾರೆ. ಧಾರ್ಮಿಕ ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಂಡು ಕಿರಿಯ ಶ್ರೀಗಳಾದ ವಿಧುಶೇಖರ ಭಾರತೀ ತೀರ್ಥರ ಆಶೀರ್ವಾದ ಪಡೆದರು. 

 

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಲಿಸ್ಟ್ ನಲ್ಲಿ ಸಂಭಾವ್ಯರಲ್ಲಿ ಹೆಸರು ಕೇಳಿ ಬರುತ್ತಿರುವ ಮೈಸೂರು ರಾಜ ವಂಶಸ್ಥ ಯದುವೀರ್ ಕೃಷ್ಣದತ್ತ ಒಡೆಯರ್ ಚಿಕ್ಕಮಗಳೂರಿನ ಶೃಂಗೇರಿ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಧಾರ್ಮಿಕ ಕಾರ್ಯಕ್ರಮ ಒಂದರಲ್ಲಿ ಭಾಗಿಯಾಗಿರುವ ಯದುವೀರ್ ಒಡೆಯರ್

ಶೀಮಠದ ಕಿರಿಯ ಜಗದ್ಗರು ವಿಧುಶೇಖರ ಭಾರತೀತೀರ್ಥ ಸ್ವಾಮೀಜಿಯವರ ಆರ್ಶೀವಾದ ಪಡೆದರು. ಮೈಸೂರು ಕೊಡಗಿಂದ ಬಿಜೆಪಿ ಅಭ್ಯರ್ಥಿಯಯಾಗಿ ಹೆಸರು ಕೇಳಿ ಬರುತ್ತಿರುವ ಬೆನ್ನಲ್ಲೆ ಟೆಂಪಲ್ ರನ್ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಭೇಟಿ ವೇಳೆಯಲ್ಲಿ ಶೃಂಗೇರಿ ಶ್ರೀ ಶಾರದಾಂಬೆ ದರ್ಶನ ಸಹಾ ಯದುವೀರ್ ಪಡೆದಿದ್ದಾರೆ.

ಶೃಂಗೇರಿ ಶ್ರೀಮಠಕ್ಕೂ ಮೈಸೂರು ಸಂಸ್ಥಾನಕ್ಕೂ ಅವಿನಾಭಾವ ಸಂಬಂಧವಿದ್ದು, ಹಿಂದೆಯೂ ಹಲವು ಕಾರ್ಯಕ್ರಮಗಳಿಗೆ ಶೃಂಗೇರಿಗೆ ಮೈಸೂರು ರಾಜವಂಶಸ್ಥರು‌ ಭೇಟಿ ನೀಡುತ್ತಾ ಬಂದಿದ್ದು, ಬಿಜೆಪಿ ಟಿಕೆಟ್ ಹೆಸರು ಕೇಳಿ ಬರುತ್ತಿರುವ ಮಧ್ಯೆ ಯದುವೀರ್ ಶೃಂಗೇರಿ ಭೇಟಿ ಕುತೂಹಲ ಮೂಡಿಸಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!