April 27, 2024

MALNAD TV

HEART OF COFFEE CITY

ಯಡಿಯೂರಪ್ಪ ಕುಟುಂಬದಿಂದ ಹೊರನಾಡಲ್ಲಿ ನವ ಚಂಡಿಕಾಯಾಗ

1 min read

 

 

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಇರುವಾಗಲೇ ಅನ್ನಪೂರ್ಣೆಯ ಮೊರೆ ಹೋಗಿದ್ದಾರೆ. ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಕುಟುಂಬ ಸಮೇತರಾಗಿ ನವ ಚಂಡಿಕಾಯಾಗ ಕೈಗೊಂಡಿದ್ದಾರೆ. 

 

ಲೋಕಸಭೆ ಚುನಾವಣೆ ಹೊಸ್ತಿಲ್ಲಲ್ಲಿ ಬಿ ಎಸ್ ವೈ ಆದಿಶಕ್ತಿ ಹೊರನಾಡ ಅನ್ನಪೂರ್ಣೇಶ್ವರಿ ಮೊರೆ ಹೋಗಿದ್ದಾರೆ. ಮಾಜಿ ಸಿ.ಎಂ ಬಿಎಸ್ ಯಡಿಯೂರಪ್ಪ ಕುಟುಂಬದೊಂದಿಗೆ ನವಚಂಡಿಕಾ ಯಾಗ ನಡೆಸಿದ್ದಾರೆ. 

ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನವಚಂಡಿಕಾ ಯಾಗ ಕೈಗೊಂಡಿದ್ದಾರೆ. ಯಾಗದಲ್ಲಿ ಕುಟುಂಬದ ಇತರೆ ಸದಸ್ಯರು ಭಾಗಿಯಾಗಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ದಂಪತಿ ಕೂಡಾ ಪಾಲ್ಗೊಂಡಿದ್ದರು. 9 ಜನ ಋತ್ವಿಜರ ನೇತೃತ್ವದಲ್ಲಿ ನಡೆಯುತ್ತಿರುವ ಯಾಗಕ್ಕೆ ಕಳೆದ ರಾತ್ರಿಯೇ ಪಾರಾಯಣ ನಡೆಸಿ ಇಂದು ನವ ಚಂಡಿಕಾಯಾಗ ನಡೆಸಲಾಗುತ್ತಿದೆ. 

ಚುನಾವಣೆ ಹೊಸ್ತಿಲ್ಲಲ್ಲಿ ಇರುವಾಗ ಕೈಗೊಂಡಿರುವ ಈ ನವ ಚಂಡಿಕಾ ಯಾಗ ಸಾಕಷ್ಟು ಮಹತ್ವವನ್ನು ಪಡೆದುಕೊಂಡಿದೆ. ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಬಂಡಾಯದ ಬಿರುಗಾಳಿ, ಅಸಮಾಧಾನ, ಪರ ವಿರೋಧ ಸಮಸ್ಯೆಗಳು ಉಲ್ಬಣ ಆಗಿರುವ ವೇಳೆಯಲ್ಲಿ ದೇವರ ಮೊರೆ ಹೋಗಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!