ಶೃಂಗೇರಿ ಕೇಂದ್ರೀಯ ಸಂಸ್ಕೃತ ವಿವಿ ವತಿಯಿಂದ ‘ಯುವ ಮಹೋತ್ಸವ’ ಕಾರ್ಯಕ್ರಮ
1 min readಚಿಕ್ಕಮಗಳೂರು: ಶೃಂಗೇರಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ವತಿಯಿಂದ ಇದೇ ನವೆಂಬರ್ 24 ರಿಂದ ಮೂರು ದಿನಗಳ ಕಾಲ ವಲಯ ಮಟ್ಟದ ಯುವ ಮಹೋತ್ಸವ ನಡೆಯಲಿದೆ ಎಂದು ವಿಶ್ವ ವಿದ್ಯಾಲಯದ ಬಿಎಡ್ ವಿಭಾಗದ ಮುಖ್ಯಸ್ಥ, ಯುವ ಮಹೋತ್ಸವದ ಸ್ಥಾನೀಯ ಸಂಯೋಜಕ ಪ್ರೊಫೆಸರ್ ಚಂದ್ರಕಾಂತ ತಿಳಿಸಿದರು.
ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಮೂರು ದಿನಗಳು ಸಾಂಸ್ಕೃತಿಕ, ಶೈಕ್ಷಣಿಕ, ಕ್ರೀಡಾ ಸ್ಪರ್ಧೆಗಳು ವಿದ್ಯಾರ್ಥಿಗಳ ಸರ್ವತೋಮುಖ ಪ್ರಗತಿ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಶೃಂಗೇರಿಯ ರಾಜೀವ್ ಗಾಂಧಿ ಪರಿಸರದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಇದೇ ವೇಳೆ ಮಾತನಾಡಿದ ಅಸಿಸ್ಟೆಂಟ್ ಪ್ರೊಫೆಸರ್ ವಿಶ್ವನಾಥ್ ಸುಂಕಸಾಲ ಯುವ ಮಹೋತ್ಸವಕ್ಕೆ ನಾಲ್ಕು ರಾಜ್ಯಗಳ 280 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದು ರನ್ನಿಂಗ್, ಕಬಡ್ಡಿ, ಬ್ಯಾಡ್ಮಿಂಟನ್, ವಾಲಿಬಾಲ್ , ಖೋ ಖೋ, ಚೆಸ್ , ಹೈ ಜಂಪ್ ಸೇರಿದಂತೆ ಹಲವು ಕ್ರೀಡೆಗಳನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g