ಕೈಗೆ ಜೈ ಎಂದ ಜಿ.ಪಂ ಮಾಜಿ ಅಧ್ಯಕ್ಷೆ ಸುಜಾತ ಕೃಷ್ಣಪ್ಪ
1 min readಕೊಪ್ಪ: ಪಕ್ಷದಲ್ಲಿನ ಒಳ ಒಪ್ಪಂದದಂತೆ ತನ್ನ ಅವಧಿ ಮುಗಿದರೂ ಸಹ ಬಿಜೆಪಿ ಪಕ್ಷದ ವರಿಷ್ಟರಿಗೆ ಮಣಿಯದೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸ್ಥಾನದಿಂದ ಕೆಳಗಿಳಿಯದೇ ಬಿಜೆಪಿ ನಾಯಕರಿಗೆ ಸೆಡ್ಡು ಹೊಡೆದಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಕೊಪ್ಪ ತಾಲೂಕಿನ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್, ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ, ಸುದೀರ್ ಕುಮಾರ್ ಮೂರಳ್ಳಿ ಹಾಗೂ ಇತರೆ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸುಜಾತ ಕೃಷ್ಣಪ್ಪ ಸೇರ್ಪಡೆಗೊಂಡರು. ಅವರನ್ನು ಕಾಂಗ್ರೆಸ್ ಮುಖಂಡರು ಆತ್ಮೀಯವಾಗಿ ಸನ್ಮಾನಿಸಿ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
ಈ ಹಿಂದೆ ಅವಧಿ ಪೂರ್ಣಗೊಂಡರು ಕೂಡ ಸುಜಾತ ಕೃಷ್ಣಪ್ಪ ಅವರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡಿರದ ಕಾರಣ ಬಿಜೆಪಿಯ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಸುಜಾತ ಕೃಷ್ಣಪ್ಪ ಅವರನ್ನು ಪಕ್ಷದಿಂದ ಅಮಾನತು ಮಾಡಿದ್ದರು. ಅಲ್ಲಿಂದಲೂ ತಮ್ಮ ನಡೆಯನ್ನು ನಿಗೂಡವಾಗಿಟ್ಟಿದ್ದ ಸುಜಾತ ಕೃಷ್ಣಪ್ಪ ಅಧಿಕೃತವಾಗಿ ವಿಧಾನಪರಿಷತ್ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಗೆ ಗುಡ್ ಬೈ ಹೇಳಿ ಕೈ ಪಾಳಯ ಸೇರಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g